<p><strong>ಬೆಳಗಾವಿ: </strong>ಇಲ್ಲಿನ ಸುಭಾಷ್ ನಗರದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿ ಮುಗಳಖೋಡ ಜಿಡಗಾ ಮಠ, ಡಿವೈನ್ ಚಾರಿಟಬಲ್ ಟ್ರಸ್ಟ್ ಹಾಗೂಸ್ವಾಮಿ ವಿವೇಕಾನಂದ ಪ್ರತಿಷ್ಠಾನ ಸಹಯೋಗದಲ್ಲಿ ಮಂಗಳವಾರ ಅನಾಥ ಮಕ್ಕಳೊಂದಿಗೆ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.</p>.<p>ಮುಗಳಖೋಡ ಜಿಡಗಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ನಾವು ಜಾತಿ ಮತ್ತು ಧರ್ಮದ ಸಂಕೋಲೆಯಿಂದ ಹೊರಬಂದು ಮೊದಲು ಮಾನವರಾಗಬೇಕು. ಹಬ್ಬ-ಹರಿದಿನಗಳ ವೇಳೆ ಸಂಕಷ್ಟದಲ್ಲಿರುವರಿಗೆ ಸಹಾಯಹಸ್ತ ಚಾಚಬೇಕು. ಸಂಭ್ರಮವನ್ನು ಇತರರಿಗೂ ಹಂಚಬೇಕು. ಆಗ ನಮ್ಮ ಬದುಕು ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ‘72 ಮಕ್ಕಳನ್ನು ಪೋಷಿಸುತ್ತಿರುವ ಈ ಕೇಂದ್ರದ ಕಾರ್ಯ ಶ್ಲಾಘನೀಯ. ಮಕ್ಕಳ ಬೆಳವಣಿಗೆಗೆ ಅಗತ್ಯ ಸಹಕಾರ ನೀಡುತ್ತೇನೆ’ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮುಖಂಡರಾದ ರಾಜು ಚಿಕ್ಕನಗೌಡರ, ದೀಪಕ ಗುಡಗನಟ್ಟಿ, ಅನಂತ ಬ್ಯಾಕೋಡ, ಚಲನಚಿತ್ರ ನಟ ಅಕ್ಷಯ ಚಂದ್ರಶೇಖರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ಸುಭಾಷ್ ನಗರದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿ ಮುಗಳಖೋಡ ಜಿಡಗಾ ಮಠ, ಡಿವೈನ್ ಚಾರಿಟಬಲ್ ಟ್ರಸ್ಟ್ ಹಾಗೂಸ್ವಾಮಿ ವಿವೇಕಾನಂದ ಪ್ರತಿಷ್ಠಾನ ಸಹಯೋಗದಲ್ಲಿ ಮಂಗಳವಾರ ಅನಾಥ ಮಕ್ಕಳೊಂದಿಗೆ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.</p>.<p>ಮುಗಳಖೋಡ ಜಿಡಗಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ನಾವು ಜಾತಿ ಮತ್ತು ಧರ್ಮದ ಸಂಕೋಲೆಯಿಂದ ಹೊರಬಂದು ಮೊದಲು ಮಾನವರಾಗಬೇಕು. ಹಬ್ಬ-ಹರಿದಿನಗಳ ವೇಳೆ ಸಂಕಷ್ಟದಲ್ಲಿರುವರಿಗೆ ಸಹಾಯಹಸ್ತ ಚಾಚಬೇಕು. ಸಂಭ್ರಮವನ್ನು ಇತರರಿಗೂ ಹಂಚಬೇಕು. ಆಗ ನಮ್ಮ ಬದುಕು ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ‘72 ಮಕ್ಕಳನ್ನು ಪೋಷಿಸುತ್ತಿರುವ ಈ ಕೇಂದ್ರದ ಕಾರ್ಯ ಶ್ಲಾಘನೀಯ. ಮಕ್ಕಳ ಬೆಳವಣಿಗೆಗೆ ಅಗತ್ಯ ಸಹಕಾರ ನೀಡುತ್ತೇನೆ’ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮುಖಂಡರಾದ ರಾಜು ಚಿಕ್ಕನಗೌಡರ, ದೀಪಕ ಗುಡಗನಟ್ಟಿ, ಅನಂತ ಬ್ಯಾಕೋಡ, ಚಲನಚಿತ್ರ ನಟ ಅಕ್ಷಯ ಚಂದ್ರಶೇಖರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>