ಬೆಳಗಾವಿ: ಕಾರ್ತೀಕ ಮಾಸದ ನಿಮಿತ್ತ ತಾಲ್ಲೂಕಿನ ಸುಕ್ಷೇತ್ರ ಸುಳೇಭಾವಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.
ಮಹಾನಗರ ಪಾಲಿಕೆ ಸದಸ್ಯ ಅಭಿಜಿತ ಜವಳಕರ ಚಾಲನೆ ನೀಡಿದರು. ‘ಕಾರ್ತೀಕ ಮಾಸದಲ್ಲಿ ನಡೆಯುವ ದೀಪೋತ್ಸವ ಎಲ್ಲರ ಬದುಕಿನಲ್ಲೂ ಬೆಳಕು ನೀಡಲಿ. ಕತ್ತಲು ಮರೆಯಾಗಲಿ. ಕೋವಿಡ್ ಸಂಕಷ್ಟದಿಂದ ಎಲ್ಲರೂ ಹೊರಬಂದು ಸುಂದರ ಜೀವನ ನಡೆಸುವಂತಾಗಲಿ. ಚೈತನ್ಯ ಮೂಡಲಿ’ ಎಂದು ಪ್ರಾರ್ಥಿಸಿದರು.
ದೇವಸ್ಥಾನದ ಅರ್ಚಕ ರಮೇಶ ಪೂಜೇರಿ ಮಾತನಾಡಿದರು.
ಗ್ರಾಮದಲ್ಲಿ ಮನೆಗಳ ಎದುರು ಆಕರ್ಷಕ ರಂಗೋಲಿಗಳನ್ನು ಬಿಡಿಸಿದ್ದರು. ದೇವಸ್ಥಾನ ಆವರಣದಲ್ಲಿ ದೀಪಗಳನ್ನು ಹಚ್ಚಲಾಯಿತು. ಮಹಿಳೆಯರಿಂದ ಆರತಿ ಕಾರ್ಯಕ್ರಮ ನಡೆಯಿತು.