<p><strong>ಬೆಳಗಾವಿ: </strong>ತಮ್ಮನ್ನು ಸಾರಿಗೆ ನೌಕರರೆಂದು ಪರಿಗಣಿಸಿ, ಅವರಿಗೆ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಎನ್ಡಬ್ಲ್ಯುಕೆಎಸ್ಆರ್ಟಿಸಿ) ನೌಕರರು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.</p>.<p>ಆಂಧ್ರಪ್ರದೇಶ ಸರ್ಕಾರದ ಮಾದರಿಯನ್ನು ಇಲ್ಲೂ ಅನುಸರಿಸಬೇಕು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಭರವಸೆ ಈಡೇರಿಸಬೇಕು ಎಂದು ಕೋರಿದರು.</p>.<p>‘ಸಾರಿಗೆ ಸಂಸ್ಥೆಯು ರಾಜ್ಯದ ಜೀವನಾಡಿಯಾಗಿದೆ. ಜನಸಾಮಾನ್ಯರಿಗೆ ಸೇವೆ ಒದಗಿಸುತ್ತಿರುವ ಪ್ರಮುಖ ಇಲಾಖೆ ನಮ್ಮದಾಗಿದೆ. ಇಲ್ಲಿನ ಸಿಬ್ಬಂದಿ ಹಗಲಿರುಳೂ ದುಡಿಯುತ್ತಿದ್ದಾರೆ. ಆದರೆ, ಸಾರಿಗೆ ನೌಕರರಿಗಿಂತ ಕಡಿಮೆ ಸೌಲಭ್ಯ ಹಾಗೂ ಸಂಬಳ ದೊರೆಯುತ್ತದೆ. ಇದರಿಂದ ನಮಗೆ ಅನ್ಯಾಯವಾಗುತ್ತಿದೆ’ ಎಂದು ತಿಳಿಸಿದರು.</p>.<p>ಇನ್ನೊಂದೆಡೆ, ನಿಗಮದ ಇಲ್ಲಿನ ಎಲ್ಲ ಘಟಕದವರು ಪತ್ರ ಚಳವಳವಳಿ ನಡೆಸಿದರು. ಪತ್ರಗಳ ಮುಖಾಂತರ ತಮ್ಮ ಅಳಲನ್ನು ಮುಖ್ಯಮಂತ್ರಿಗೆ ಕಳುಹಿಸುವ ಚಳವಳಿ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ತಮ್ಮನ್ನು ಸಾರಿಗೆ ನೌಕರರೆಂದು ಪರಿಗಣಿಸಿ, ಅವರಿಗೆ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಎನ್ಡಬ್ಲ್ಯುಕೆಎಸ್ಆರ್ಟಿಸಿ) ನೌಕರರು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.</p>.<p>ಆಂಧ್ರಪ್ರದೇಶ ಸರ್ಕಾರದ ಮಾದರಿಯನ್ನು ಇಲ್ಲೂ ಅನುಸರಿಸಬೇಕು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಭರವಸೆ ಈಡೇರಿಸಬೇಕು ಎಂದು ಕೋರಿದರು.</p>.<p>‘ಸಾರಿಗೆ ಸಂಸ್ಥೆಯು ರಾಜ್ಯದ ಜೀವನಾಡಿಯಾಗಿದೆ. ಜನಸಾಮಾನ್ಯರಿಗೆ ಸೇವೆ ಒದಗಿಸುತ್ತಿರುವ ಪ್ರಮುಖ ಇಲಾಖೆ ನಮ್ಮದಾಗಿದೆ. ಇಲ್ಲಿನ ಸಿಬ್ಬಂದಿ ಹಗಲಿರುಳೂ ದುಡಿಯುತ್ತಿದ್ದಾರೆ. ಆದರೆ, ಸಾರಿಗೆ ನೌಕರರಿಗಿಂತ ಕಡಿಮೆ ಸೌಲಭ್ಯ ಹಾಗೂ ಸಂಬಳ ದೊರೆಯುತ್ತದೆ. ಇದರಿಂದ ನಮಗೆ ಅನ್ಯಾಯವಾಗುತ್ತಿದೆ’ ಎಂದು ತಿಳಿಸಿದರು.</p>.<p>ಇನ್ನೊಂದೆಡೆ, ನಿಗಮದ ಇಲ್ಲಿನ ಎಲ್ಲ ಘಟಕದವರು ಪತ್ರ ಚಳವಳವಳಿ ನಡೆಸಿದರು. ಪತ್ರಗಳ ಮುಖಾಂತರ ತಮ್ಮ ಅಳಲನ್ನು ಮುಖ್ಯಮಂತ್ರಿಗೆ ಕಳುಹಿಸುವ ಚಳವಳಿ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>