ಜೈ ಮಹಾರಾಷ್ಟ್ರ, ಜೈ ಶಿವಾಜಿ ಎಂದು ಕಾರ್ಯಕ್ರಮವೊಂದರಲ್ಲಿ ಘೋಷಣೆ ಹಾಕಿರುವ ನಾರಾಯಣಗೌಡ ಅವರ ವಿಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಶೋಕ ಚಂದರಗಿ, ‘ಪಾಕಿಸ್ತಾನದ ಪರವಾಗಿ ಘೋಷಣೆ ಹಾಕಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿದಂತೆ, ಈ ಸಚಿವರ ವಿರುದ್ಧ ರಾಜ್ಯ ದ್ರೋಹದ ಪ್ರಕರಣವನ್ನು ರಾಜ್ಯದ ಪೊಲೀಸರು ಏಕೆ ದಾಖಲಿಸಬಾರದು’ ಎಂದು ಪ್ರಶ್ನಿಸಿದ್ದಾರೆ.