ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಸಮರ್ಪಕ ಪೂರೈಕೆಗೆ ಆಗ್ರಹ

Last Updated 26 ಏಪ್ರಿಲ್ 2022, 3:15 IST
ಅಕ್ಷರ ಗಾತ್ರ

ಸವದತ್ತಿ: ಕುಡಿಯುವ ನೀರಿನ ಅಸಮರ್ಪಕ ಪೂರೈಕೆ ಕುರಿತು ಸ್ಟೇಟ್ ಬ್ಯಾಂಕ್ ಸಮೀಪದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸಾರ್ವಜನಿಕ ಸಭೆ ನಡೆಯಿತು. ನಿಯಮಿತವಾಗಿ ನೀರು ಪೂರೈಸುವಂತೆ ಬುಧವಾರ ಮನವಿ ಮಾಡಿ ಕಾಲಾವಕಾಶ ನೀಡುವುದು. ಅದಕ್ಕೆ ಪುರಸಭೆ ಸ್ಪಂದಿಸದಿದ್ದರೆ ಪ್ರತಿ ವಾರ್ಡಿನ ಸದಸ್ಯರ ಮನೆ ಮುಂದೆ ಧರಣಿ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.

ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದರೂ, ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕುಡಿಯುವ ನೀರಿನ ಯೋಜನೆ ಪೂರ್ಣವಾಗಲು ಇನ್ನೂ ಸಾಕಷ್ಟು ಸಮಯಬೇಕು. ಸದ್ಯ 9 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ ಎಂದು ನಾಗರಿಕರು ತಿಳಿಸಿದರು.

ಶಂಕರ ಇಜಂತಕರ, ಮಲ್ಲಿಕಾರ್ಜುನ ಬೀಳಗಿ, ಸೋಮಣ್ಣ ಮಲ್ಲೂರ, ರಾಜು ಮಡ್ಲಿ, ಹೊನಗೌಡ ಪಾಟೀಲ, ಸುರೇಶ ತಿಗಡಿ, ಎನ್.ಜಿ. ರಾಯನಗೌಡ್ರ, ಪುಂಡಲೀಕ ಮರಾಠೆ, ಜಗದೀಶ ವಡಕನ್ನವರ, ಸತ್ಯಪ್ಪ ನಡುವಿನಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT