ಸವದತ್ತಿ: ಕುಡಿಯುವ ನೀರಿನ ಅಸಮರ್ಪಕ ಪೂರೈಕೆ ಕುರಿತು ಸ್ಟೇಟ್ ಬ್ಯಾಂಕ್ ಸಮೀಪದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸಾರ್ವಜನಿಕ ಸಭೆ ನಡೆಯಿತು. ನಿಯಮಿತವಾಗಿ ನೀರು ಪೂರೈಸುವಂತೆ ಬುಧವಾರ ಮನವಿ ಮಾಡಿ ಕಾಲಾವಕಾಶ ನೀಡುವುದು. ಅದಕ್ಕೆ ಪುರಸಭೆ ಸ್ಪಂದಿಸದಿದ್ದರೆ ಪ್ರತಿ ವಾರ್ಡಿನ ಸದಸ್ಯರ ಮನೆ ಮುಂದೆ ಧರಣಿ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.
ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದರೂ, ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕುಡಿಯುವ ನೀರಿನ ಯೋಜನೆ ಪೂರ್ಣವಾಗಲು ಇನ್ನೂ ಸಾಕಷ್ಟು ಸಮಯಬೇಕು. ಸದ್ಯ 9 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ ಎಂದು ನಾಗರಿಕರು ತಿಳಿಸಿದರು.