<p><strong>ಚಿಕ್ಕೋಡಿ</strong>: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಪಟ್ಟಣದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.</p>.<p>2010-11ರಲ್ಲಿಯೇ ಕರಾಡ-ಕೊಲ್ಹಾಪುರ-ಬೆಳಗಾವಿ ರೈಲ್ವೆ ಮಾರ್ಗ ಹಾಗೂ ಶೇಡಬಾಳ-ಅಥಣಿ-ವಿಜಯಪೂರ ನೂತನ ರೈಲ್ವೆ ಮಾರ್ಗಗಳನ್ನು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೇ ಕಳೆದ ಒಂದೂವರೆ ದಶಕದಿಂದ ಕುಂಟುತ್ತಾ ಸಾಗಿರುವ ಕುಡಚಿ-ಬಾಗಲಕೋಟೆ ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.</p>.<p>ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ನೀಡಿರುವ ಮನವಿ ಸ್ವೀಕರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಸಂಸತ್ತಿನಲ್ಲಿ ಈ ಕುರಿತು ಧ್ವನಿ ಎತ್ತಿ ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದರು.</p>.<p>ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಸಂಜಯ ಪಾಟೀಲ, ಮಾಳಪ್ಪ ಕರೆನ್ನವರ, ಕಾನಪ್ಪ ಬಾಡ, ವಿಠ್ಠಲ ಡಾವಾಳೆ, ರಮೇಶ ಡಂಗೇರ, ಅಮೋಲ ನಾವಿ, ಸಂಜು ಕೇಸ್ತಿಕರ, ದುಂಡಪ್ಪ ಗುರವ, ವಿಶಾಲ ಮೇಕ್ರೆ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಪಟ್ಟಣದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.</p>.<p>2010-11ರಲ್ಲಿಯೇ ಕರಾಡ-ಕೊಲ್ಹಾಪುರ-ಬೆಳಗಾವಿ ರೈಲ್ವೆ ಮಾರ್ಗ ಹಾಗೂ ಶೇಡಬಾಳ-ಅಥಣಿ-ವಿಜಯಪೂರ ನೂತನ ರೈಲ್ವೆ ಮಾರ್ಗಗಳನ್ನು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೇ ಕಳೆದ ಒಂದೂವರೆ ದಶಕದಿಂದ ಕುಂಟುತ್ತಾ ಸಾಗಿರುವ ಕುಡಚಿ-ಬಾಗಲಕೋಟೆ ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.</p>.<p>ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ನೀಡಿರುವ ಮನವಿ ಸ್ವೀಕರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಸಂಸತ್ತಿನಲ್ಲಿ ಈ ಕುರಿತು ಧ್ವನಿ ಎತ್ತಿ ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದರು.</p>.<p>ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಸಂಜಯ ಪಾಟೀಲ, ಮಾಳಪ್ಪ ಕರೆನ್ನವರ, ಕಾನಪ್ಪ ಬಾಡ, ವಿಠ್ಠಲ ಡಾವಾಳೆ, ರಮೇಶ ಡಂಗೇರ, ಅಮೋಲ ನಾವಿ, ಸಂಜು ಕೇಸ್ತಿಕರ, ದುಂಡಪ್ಪ ಗುರವ, ವಿಶಾಲ ಮೇಕ್ರೆ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>