<p><strong>ಬೆಳಗಾವಿ:</strong> ‘ಕೋವಿಡ್ ನಿಯಂತ್ರಣಕ್ಕಾಗಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರವಾಗಿದ್ದು, ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಯೊಬ್ಬರಿಂದ ಮಾಡಿಸಬೇಕು’ ಎಂದು ಶಾಸಕ ಕೆ.ಆರ್. ರಮೇಶಕುಮಾರ್ ಒತ್ತಾಯಿಸಿದರು.</p>.<p>ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘₹ 50ಕ್ಕೆ ಸಿಗುವ ಮಾಸ್ಕ್ ಅನ್ನು ₹ 100ರಿಂದ ₹ 150 ಕೊಟ್ಟು ಖರೀದಿಸಲಾಗಿದೆ. ಥರ್ಮಲ್ ಸ್ಕ್ಯಾನರ್ ಬೆಲೆ ₹ 2,000ದಿಂದ ₹ 3,000 ಇದೆ. ಆರೋಗ್ಯ ಇಲಾಖೆಯು ₹ 5,900 ನೀಡಿ ಖರೀದಿಸಿದ್ದರೆ, ಸಮಾಜ ಕಲ್ಯಾಣ ಇಲಾಖೆಯು ₹ 9,000 ನೀಡಿದೆ. ಸ್ಯಾನಿಟೈಸರ್ ದರ ಮಾರುಕಟ್ಟೆಯಲ್ಲಿ ₹ 80ರಿಂದ 100 ಇದೆ. ಆರೋಗ್ಯ ಇಲಾಖೆಯು ಇದಕ್ಕೆ ₹ 250 ನೀಡಿದ್ದರೆ ಸಮಾಜ ಕಲ್ಯಾಣ ಇಲಾಖೆಯು ₹ 600 ನೀಡಿದೆ. ಹೀಗೆ ಪ್ರತಿಯೊಂದು ವಸ್ತುಗಳನ್ನು ಮಾರುಕಟ್ಟೆ ಬೆಲೆಗಿಂತ ಹಲವು ಪಟ್ಟು ಹೆಚ್ಚು ನೀಡಿ ಖರೀದಿಸಲಾಗಿದೆ’ ಎಂದು ಆರೋಪಿಸಿದರು.</p>.<p>‘ಇದರ ಬಗ್ಗೆ ಸತ್ಯಾಸತ್ಯತೆ ಹೊರಬರಬೇಕಾದರೆ ನ್ಯಾಯಮೂರ್ತಿಯೊಬ್ಬರಿಂದ ತನಿಖೆಯಾಗಲೇ ಬೇಕು’ ಎಂದು ಒತ್ತಾಯಿಸಿದರು.</p>.<p>‘ಹಿಂದಿನ ಸಿದ್ದರಾಮಯ್ಯ ಸರ್ಕಾರವಿದ್ದಾಗ ಆರೋಗ್ಯ ಇಲಾಖೆಯಲ್ಲಿ ಅವ್ಯವಹಾರವಾಗಿತ್ತು ಎಂದು ಬಿಜೆಪಿಯವರು ಪ್ರತ್ಯಾರೋಪ ಮಾಡುತ್ತಿದ್ದಾರೆ. ಆರೋಪಕ್ಕೆ ಪ್ರತ್ಯಾರೋಪ ಉತ್ತರವಾಗುವುದಿಲ್ಲ. ಜನರನ್ನು ಹಣವನ್ನು ಸರ್ಕಾರ ಯದ್ವಾತದ್ವಾ ಖರ್ಚು ಮಾಡುತ್ತಿದ್ದರೆ, ಅಂತಹ ದುರುಪಯೋಗವನ್ನು ತಡೆಯುವುದು ವಿರೋಧ ಪಕ್ಷದ ಕೆಲಸ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕಾರಣವಿಲ್ಲ, ನೀಚತನವಿಲ್ಲ’ ಎಂದು ಸ್ಪಷ್ಟನೆ ನೀಡಿದರು.</p>.<p>ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ‘ದೇಶದ ಜನರು ಆರ್ಥಿಕ ಸಂಕಷ್ಟದಿಂದ ಹಾಗೂ ಕೊರೊನಾ ಭೀತಿಯಿಂದ ನಲುಗಿಹೋಗಿದ್ದಾರೆ. ಇಂತಹ ಸಂದರ್ಭದಲ್ಲೂ ಬಿಜೆಪಿಯವರು ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರವನ್ನು ಕೆಡವಿದರು. ಈಗ ರಾಜಸ್ಥಾನದಲ್ಲೂ ಅದನ್ನೇ ಮಾಡಲು ಹೊರಟಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ’ ಎಂದು ಟೀಕಿಸಿದರು.</p>.<p>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಳಿವಯಸ್ಸಿನಲ್ಲೂ ತುಂಬಾ ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರಿಗೆ ಇತರ ಸಚಿವರ ಸಹಕಾರ ಸಿಗುತ್ತಿಲ್ಲ. ಅವರ ನಡುವೆ ಸಮನ್ವಯ ಇಲ್ಲ’ ಎಂದು ಕಿಚಾಯಿಸಿದರು.</p>.<p>ಶಾಸಕಿ ಅಂಜಲಿ ನಿಂಬಾಳ್ಕರ, ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮುಖಂಡ ಫಿರೋಜ್ ಸೇಠ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕೋವಿಡ್ ನಿಯಂತ್ರಣಕ್ಕಾಗಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರವಾಗಿದ್ದು, ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಯೊಬ್ಬರಿಂದ ಮಾಡಿಸಬೇಕು’ ಎಂದು ಶಾಸಕ ಕೆ.ಆರ್. ರಮೇಶಕುಮಾರ್ ಒತ್ತಾಯಿಸಿದರು.</p>.<p>ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘₹ 50ಕ್ಕೆ ಸಿಗುವ ಮಾಸ್ಕ್ ಅನ್ನು ₹ 100ರಿಂದ ₹ 150 ಕೊಟ್ಟು ಖರೀದಿಸಲಾಗಿದೆ. ಥರ್ಮಲ್ ಸ್ಕ್ಯಾನರ್ ಬೆಲೆ ₹ 2,000ದಿಂದ ₹ 3,000 ಇದೆ. ಆರೋಗ್ಯ ಇಲಾಖೆಯು ₹ 5,900 ನೀಡಿ ಖರೀದಿಸಿದ್ದರೆ, ಸಮಾಜ ಕಲ್ಯಾಣ ಇಲಾಖೆಯು ₹ 9,000 ನೀಡಿದೆ. ಸ್ಯಾನಿಟೈಸರ್ ದರ ಮಾರುಕಟ್ಟೆಯಲ್ಲಿ ₹ 80ರಿಂದ 100 ಇದೆ. ಆರೋಗ್ಯ ಇಲಾಖೆಯು ಇದಕ್ಕೆ ₹ 250 ನೀಡಿದ್ದರೆ ಸಮಾಜ ಕಲ್ಯಾಣ ಇಲಾಖೆಯು ₹ 600 ನೀಡಿದೆ. ಹೀಗೆ ಪ್ರತಿಯೊಂದು ವಸ್ತುಗಳನ್ನು ಮಾರುಕಟ್ಟೆ ಬೆಲೆಗಿಂತ ಹಲವು ಪಟ್ಟು ಹೆಚ್ಚು ನೀಡಿ ಖರೀದಿಸಲಾಗಿದೆ’ ಎಂದು ಆರೋಪಿಸಿದರು.</p>.<p>‘ಇದರ ಬಗ್ಗೆ ಸತ್ಯಾಸತ್ಯತೆ ಹೊರಬರಬೇಕಾದರೆ ನ್ಯಾಯಮೂರ್ತಿಯೊಬ್ಬರಿಂದ ತನಿಖೆಯಾಗಲೇ ಬೇಕು’ ಎಂದು ಒತ್ತಾಯಿಸಿದರು.</p>.<p>‘ಹಿಂದಿನ ಸಿದ್ದರಾಮಯ್ಯ ಸರ್ಕಾರವಿದ್ದಾಗ ಆರೋಗ್ಯ ಇಲಾಖೆಯಲ್ಲಿ ಅವ್ಯವಹಾರವಾಗಿತ್ತು ಎಂದು ಬಿಜೆಪಿಯವರು ಪ್ರತ್ಯಾರೋಪ ಮಾಡುತ್ತಿದ್ದಾರೆ. ಆರೋಪಕ್ಕೆ ಪ್ರತ್ಯಾರೋಪ ಉತ್ತರವಾಗುವುದಿಲ್ಲ. ಜನರನ್ನು ಹಣವನ್ನು ಸರ್ಕಾರ ಯದ್ವಾತದ್ವಾ ಖರ್ಚು ಮಾಡುತ್ತಿದ್ದರೆ, ಅಂತಹ ದುರುಪಯೋಗವನ್ನು ತಡೆಯುವುದು ವಿರೋಧ ಪಕ್ಷದ ಕೆಲಸ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕಾರಣವಿಲ್ಲ, ನೀಚತನವಿಲ್ಲ’ ಎಂದು ಸ್ಪಷ್ಟನೆ ನೀಡಿದರು.</p>.<p>ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ‘ದೇಶದ ಜನರು ಆರ್ಥಿಕ ಸಂಕಷ್ಟದಿಂದ ಹಾಗೂ ಕೊರೊನಾ ಭೀತಿಯಿಂದ ನಲುಗಿಹೋಗಿದ್ದಾರೆ. ಇಂತಹ ಸಂದರ್ಭದಲ್ಲೂ ಬಿಜೆಪಿಯವರು ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರವನ್ನು ಕೆಡವಿದರು. ಈಗ ರಾಜಸ್ಥಾನದಲ್ಲೂ ಅದನ್ನೇ ಮಾಡಲು ಹೊರಟಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ’ ಎಂದು ಟೀಕಿಸಿದರು.</p>.<p>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಳಿವಯಸ್ಸಿನಲ್ಲೂ ತುಂಬಾ ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರಿಗೆ ಇತರ ಸಚಿವರ ಸಹಕಾರ ಸಿಗುತ್ತಿಲ್ಲ. ಅವರ ನಡುವೆ ಸಮನ್ವಯ ಇಲ್ಲ’ ಎಂದು ಕಿಚಾಯಿಸಿದರು.</p>.<p>ಶಾಸಕಿ ಅಂಜಲಿ ನಿಂಬಾಳ್ಕರ, ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮುಖಂಡ ಫಿರೋಜ್ ಸೇಠ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>