‘ರಾಯಣ್ಣ ಹುಟ್ಟಿದ ನೆಲದಲ್ಲಿಯೇ ಆತನಿಗೆ ಪ್ರತಿಮೆ ಸ್ಥಾಪಿಸಲು ಅಡ್ಡಿಪಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸ್ಥಳೀಯ ಅಧಿಕಾರಿಗಳ ನಡೆ ಖಂಡನೀಯ. ಮರಾಠಿಗರ ಮತಗಳಿಕೆಗಾಗಿ ಕೆಲವು ರಾಜಕೀಯ ಮುಖಂಡರು ಕೂಡ ಇದಕ್ಕೆ ಸಾಥ್ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ತಕ್ಷಣ ಪ್ರತಿಮೆಯನ್ನು ಪುನಃ ಸ್ಥಾಪಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ’ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ಪದಾಧಿಕಾರಿಗಳಾದ ನಾಗರಾಜ ದೊಡಮನಿ, ಸಂತೋಷ ಗುಬಚಿ, ಮಂಜುನಾಥ ಪಾಟೀಲ, ಮಂಜುನಾಥ ಹಡಪದ ಎಚ್ಚರಿಕೆ ನೀಡಿದರು.