<p><strong>ಬೆಳಗಾವಿ:</strong> ‘ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದ ಕೊರಮ, ಕೊರಚ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸಬೇಕು’ ಎಂದು ರಾಜ್ಯ ಕೊರಮ–ಕೊರಚ ಮಹಿಳಾ ಸಮಾಜದ ಅಧ್ಯಕ್ಷೆ ಚಂದ್ರಿಕಾ ಬಿ.ಎನ್. ಒತ್ತಾಯಿಸಿದರು.</p>.<p>ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಕೊರಮ, ಕೊರಚ ಮಹಿಳಾ ಸಮಾಜದ ರಾಜ್ಯಮಟ್ಟದ ಪ್ರಥಮ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರದಿಂದ ರಾಜಕೀಯವಾಗಿ ನಮಗೆ ಪ್ರಾತಿನಿಧ್ಯ ಸಿಗಬೇಕು. ವಿವಿಧ ಚುನಾವಣೆಗಳಲ್ಲಿ ಸೀಟು ಹಂಚಿಕೆ ಮಾಡುವಾಗ ಎಲ್ಲ ರಾಜಕೀಯ ಪಕ್ಷಗಳು ನಮ್ಮ ಸಮಾಜಕ್ಕೆ ಪ್ರಾಧಾನ್ಯತೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ‘ಲಭ್ಯ ಅವಕಾಶ ಬಳಸಿಕೊಂಡು ಮಹಿಳೆಯರು ಎಲ್ಲ ರಂಗಗಳಲ್ಲಿ ಮುಂಚೂಣಿಗೆ ಬರಬೇಕಿದೆ’ ಎಂದರು.</p>.<p>ವಿವಿಧ ರಂಗಗಳಲ್ಲಿ ಸಾಧನೆಗೈದವನ್ನು ಸತ್ಕರಿಸಲಾಯಿತು.</p>.<p>ರಾಜ್ಯ ಕೊರಮ–ಕೊರಚ ಮಹಿಳಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷೆ ಯಶೋಧಾ ಭಜಂತ್ರಿ, ರೇಣುಕಾ ಮಲ್ಲೂರು, ಪದ್ಮಾವತಿ ಸಿಂಗನಹಳ್ಳಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದ ಕೊರಮ, ಕೊರಚ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸಬೇಕು’ ಎಂದು ರಾಜ್ಯ ಕೊರಮ–ಕೊರಚ ಮಹಿಳಾ ಸಮಾಜದ ಅಧ್ಯಕ್ಷೆ ಚಂದ್ರಿಕಾ ಬಿ.ಎನ್. ಒತ್ತಾಯಿಸಿದರು.</p>.<p>ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಕೊರಮ, ಕೊರಚ ಮಹಿಳಾ ಸಮಾಜದ ರಾಜ್ಯಮಟ್ಟದ ಪ್ರಥಮ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರದಿಂದ ರಾಜಕೀಯವಾಗಿ ನಮಗೆ ಪ್ರಾತಿನಿಧ್ಯ ಸಿಗಬೇಕು. ವಿವಿಧ ಚುನಾವಣೆಗಳಲ್ಲಿ ಸೀಟು ಹಂಚಿಕೆ ಮಾಡುವಾಗ ಎಲ್ಲ ರಾಜಕೀಯ ಪಕ್ಷಗಳು ನಮ್ಮ ಸಮಾಜಕ್ಕೆ ಪ್ರಾಧಾನ್ಯತೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ‘ಲಭ್ಯ ಅವಕಾಶ ಬಳಸಿಕೊಂಡು ಮಹಿಳೆಯರು ಎಲ್ಲ ರಂಗಗಳಲ್ಲಿ ಮುಂಚೂಣಿಗೆ ಬರಬೇಕಿದೆ’ ಎಂದರು.</p>.<p>ವಿವಿಧ ರಂಗಗಳಲ್ಲಿ ಸಾಧನೆಗೈದವನ್ನು ಸತ್ಕರಿಸಲಾಯಿತು.</p>.<p>ರಾಜ್ಯ ಕೊರಮ–ಕೊರಚ ಮಹಿಳಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷೆ ಯಶೋಧಾ ಭಜಂತ್ರಿ, ರೇಣುಕಾ ಮಲ್ಲೂರು, ಪದ್ಮಾವತಿ ಸಿಂಗನಹಳ್ಳಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>