<p><strong>ಹುಕ್ಕೇರಿ (ಬೆಳಗಾವಿ ಜಿಲ್ಲೆ):</strong> ‘ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದ್ದಲ್ಲಿ, ಪ್ರತಿಭಟಿಸಿ ನ್ಯಾಯ ಪಡೆಯಬೇಕು. ಗಟ್ಟಿಧ್ವನಿಯಲ್ಲಿ ಬೇಡಿಕೆಗಳನ್ನು ಮಂಡಿಸಬೇಕು. ಪ್ರತ್ಯೇಕ ರಾಜ್ಯದ ಬೇಡಿಕೆ ಸೂಕ್ತವಲ್ಲ. ಇದನ್ನು ನಾನು ಒಪ್ಪುವುದಿಲ್ಲ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>‘ಉತ್ತರ ಕರ್ನಾಟಕ ಜಿಲ್ಲೆಗಳ ಸಮಸ್ಯೆ ಕುರಿತ ಚರ್ಚೆಯಲ್ಲಿ ಈ ಭಾಗದ ಶಾಸಕರು ಸಕ್ರಿಯವಾಗಿ ಭಾಗವಹಿಸುವುದಿಲ್ಲ. ನಿರಾಸಕ್ತಿ ತೋರಿ ಹೊರಹೋಗುತ್ತಾರೆ. ದಕ್ಷಿಣ ಕರ್ನಾಟಕದ ಶಾಸಕರೇ ಹೆಚ್ಚು ಮಾತನಾಡುತ್ತಾರೆ’ ಎಂದೂ ಇಲ್ಲಿ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬೆಳಗಾವಿಯ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಶಾಸಕರ ವಸತಿಗಾಗಿ ₹ 20 ಕೋಟಿ ವ್ಯಯವಾಗುತ್ತದೆ. ಹೀಗಾಗಿ ಅಲ್ಲಿ ಶಾಸಕರ ಭವನ ನಿರ್ಮಿಸಲು ಸಲಹೆ ನೀಡಿರುವೆ’ ಎಂದರು.</p>.<p>‘ಚಳಿಗಾಲದ ಅಧಿವೇಶನದಲ್ಲಿ ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ತಲೆ ಕೆಡಿಸಿ ಕೊಳ್ಳುವುದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ (ಬೆಳಗಾವಿ ಜಿಲ್ಲೆ):</strong> ‘ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದ್ದಲ್ಲಿ, ಪ್ರತಿಭಟಿಸಿ ನ್ಯಾಯ ಪಡೆಯಬೇಕು. ಗಟ್ಟಿಧ್ವನಿಯಲ್ಲಿ ಬೇಡಿಕೆಗಳನ್ನು ಮಂಡಿಸಬೇಕು. ಪ್ರತ್ಯೇಕ ರಾಜ್ಯದ ಬೇಡಿಕೆ ಸೂಕ್ತವಲ್ಲ. ಇದನ್ನು ನಾನು ಒಪ್ಪುವುದಿಲ್ಲ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>‘ಉತ್ತರ ಕರ್ನಾಟಕ ಜಿಲ್ಲೆಗಳ ಸಮಸ್ಯೆ ಕುರಿತ ಚರ್ಚೆಯಲ್ಲಿ ಈ ಭಾಗದ ಶಾಸಕರು ಸಕ್ರಿಯವಾಗಿ ಭಾಗವಹಿಸುವುದಿಲ್ಲ. ನಿರಾಸಕ್ತಿ ತೋರಿ ಹೊರಹೋಗುತ್ತಾರೆ. ದಕ್ಷಿಣ ಕರ್ನಾಟಕದ ಶಾಸಕರೇ ಹೆಚ್ಚು ಮಾತನಾಡುತ್ತಾರೆ’ ಎಂದೂ ಇಲ್ಲಿ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬೆಳಗಾವಿಯ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಶಾಸಕರ ವಸತಿಗಾಗಿ ₹ 20 ಕೋಟಿ ವ್ಯಯವಾಗುತ್ತದೆ. ಹೀಗಾಗಿ ಅಲ್ಲಿ ಶಾಸಕರ ಭವನ ನಿರ್ಮಿಸಲು ಸಲಹೆ ನೀಡಿರುವೆ’ ಎಂದರು.</p>.<p>‘ಚಳಿಗಾಲದ ಅಧಿವೇಶನದಲ್ಲಿ ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ತಲೆ ಕೆಡಿಸಿ ಕೊಳ್ಳುವುದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>