‘ಮೀಸಲಾತಿಗೆ ಸಂಬಂಧಿಸಿದಂತೆ ವಿವಿಧ ಪ್ರಕರಣಗಳ ವಿಚಾರಣೆ ನಡೆದಾಗಲೆಲ್ಲಾ ಜಾತಿ ಆಧಾರಿತ ಮೀಸಲಾತಿಗೆ ಆಧಾರಗಳೇನು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸುತ್ತಲೇ ಬಂದಿದೆ. ಇಂತಹ ಪ್ರಶ್ನೆಗಳಿಗೆ ಯಾವುದೇ ಸರ್ಕಾರಕ್ಕೆ ಸಮರ್ಪಕವಾಗಿ ಉತ್ತರ ನೀಡಲು ಸಾಧ್ಯವಾಗಿಲ್ಲ. ಜನಸಂಖ್ಯೆ ಆಧರಿಸಿ ಸರ್ಕಾರದ ಸೌಲಭ್ಯ ತಲುಪಿಸಲು ಹಾಗೂ ಯೋಜನೆಗಳನ್ನು ರೂಪಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾತಿಗಣತಿ ನಡೆಸಿದೆ. ಆದರೆ, ಹಲವು ವರ್ಷಗಳು ಗತಿಸಿದರೂ ವರದಿ ಬಹಿರಂಗಪಡಿಸದಿರುವುದು ಖಂಡನೀಯ’ ಎಂದರು.