‘ಜಲಾಶಯ ನಿರ್ಮಿಸಿದ್ದರಿಂದ ಹೊಲ ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಸರಿಯಾದ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಈಚೆಗೆ 71 ದಿನಗಳವರೆಗೆ ಬೀದರ್ ಜಿಲ್ಲಾಧಿಕಾರಿ ಕಚೇರಿ ಬಳಿ ಸತತವಾಗಿ ಧರಣಿ ನಡೆಸಿದ್ದೆವು. ಇದಕ್ಕೆ ಸ್ಪಂದಿಸಿದ ಸರ್ಕಾರ ಪ್ರತಿನಿಧಿಗಳನ್ನು ಆಹ್ವಾನಿಸಿ ಬೆಂಗಳೂರಿನಲ್ಲಿ ಸಭೆ ನಡೆಸಿತ್ತು. ವಿಧಾನಸಭೆ ಉಪ ಚುನಾವಣೆ ಮಾದರಿ ನೀತಿಸಂಹಿತೆ ಮುಕ್ತಾಯಗೊಂಡ ನಂತರ, ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಹೀಗಾಗಿ, ಅಹೋರಾತ್ರಿ ಧರಣಿಯನ್ನು ಕೈಬಿಡಲಾಗಿತ್ತು. ಆದರೆ, ಒಂದೂವರೆ ತಿಂಗಳಾದರೂ ಬೇಡಿಕೆಗಳು ಈಡೇರಿಲ್ಲ’ ಎಂದು ಧರಣಿನಿರತರು ದೂರಿದರು.