ರೈತ ಮುಖಂಡ ಕಲ್ಯಾಣರಾವ್ ಮುಚಳಂಬಿ ಮಾತನಾಡಿ, ‘ನಾವು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಪ್ರಮುಖ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರ ಮಾಡುತ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ಅವರು 2017ರಲ್ಲಿ ಹೇಳಿದ್ದರು. ಶ್ರೀಗಳ ಎದುರು ಭರವಸೆ ನೀಡಿದ್ದರು. ಆದರೆ, ಅದು ಇಲ್ಲಿಯವರೆಗೂ ಆಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.