‘ಬೆಳಗಾವಿಯಿಂದ ಸುಳಗ, ಬಾಚಿ, ಚಂದಗಡ, ಅಂಬೋಲಿ ಮಾರ್ಗವಾಗಿ 127 ಕಿ.ಮೀ. ರಾಜ್ಯ ಹೆದ್ದಾರಿಯನ್ನು ಭಾರತಮಾಲಾ ಯೋಜನೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಿಸಿದಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ಸಂಪರ್ಕವು ಉತ್ತಮವಾಗುತ್ತದೆ. ಗಡಿಯಲ್ಲಿರುವ ಬೆಳಗಾವಿ ಮತ್ತು ಚಂದಗಡ ತಾಲ್ಲೂಕಿನ ಜನರಿಗೆ ಅನುಕೂಲವಾಗುತ್ತದೆ. ಈ ಭಾಗದಲ್ಲಿನ ಜನರಿಗೆ ಉದ್ಯೋಗ ಅವಕಾಶಗಳು ಸಿಗುತ್ತವೆ. ಕೃಷಿಕರು ಮತ್ತು ಇತರ ವ್ಯಾಪಾರಿಗಳಿಗೆ ಪ್ರಯೋಜನವಾಗುತ್ತದೆ’ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.