‘ನೇಕಾರರು ಸಿದ್ಧಪಡಿಸಿರುವ ಸೀರೆಗಳ ಖರೀದಿ ಪ್ರಕ್ರಿಯೆಯನ್ನು ತ್ವರಿತವಾಗಿ ನಡೆಸಬೇಕು. ಶೂನ್ಯ ಬಡ್ಡಿ ದರದಲ್ಲಿ ದುಡಿಯುವ ಬಂಡವಾಳ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿರುವ ವಿದ್ಯುತ್ ಚಾಲಿತ ಮಗ್ಗಗಳ ಗಣತಿ ನಡೆಸಬೇಕು. ಕೆಎಚ್ಡಿಸಿಯಿಂದ ನೇಕಾರರ ಶ್ರೇಯೋಭಿವೃದ್ಧಿಗಾಗಿ ಆವೃತ್ತ ನಿಧಿ ಸ್ಥಾಪನೆಯಾಗಬೇಕು. ನಿಗಮದ ₹ 108 ಕೋಟಿ ಸಾಲವನ್ನು ಸರ್ಕಾರವೇ ಸಂಪೂರ್ಣವಾಗಿ ಭರಿಸಬೇಕು’ ಎಂದು ಆಗ್ರಹಿಸಿದರು.