ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಸೋಮವಾರ ಭೇಟಿಯಾಗಿ ಚರ್ಚಿಸಿದ ಅವರು, ‘ಹಲಗಾ ಬಳಿ ಎಸ್ಟಿಪಿ ನಿರ್ಮಾಣ ಮಾಡಲಾಗುತ್ತಿದೆ. ನಗರದಿಂದ ಹರಿದುಬರುವ ಬಳ್ಳಾರಿ ನಾಲಾದ ಕಲುಷಿತ ನೀರಿನಿಂದ ಬೆಳಗಾವಿ, ಹುಕ್ಕೇರಿ ಹಾಗೂ ಗೋಕಾಕ ತಾಲ್ಲೂಕುಗಳ ಜನರಿಗೆ ಬಹಳಷ್ಟು ಸಮಸ್ಯೆ ಆಗುತ್ತಿದೆ. ನಾಲಾದ ನೀರನ್ನು ಸ್ವಚ್ಛ ಮಾಡಿ, ಬಿಡುವುದೇ ಇದಕ್ಕೆ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ತಿಳಿಸಿದರು.