<p><strong>ಬೆಳಗಾವಿ:</strong> ‘ತಾಲ್ಲೂಕಿನ ಪೀರನವಾಡಿ ಸೇರಿದಂತೆ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದರೂ ಅಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನಿಲ್ಲಿಸಬಾರದು’ ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯವರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾ ಪಂಚಾಯಿತಿವರೆಗೆ ಮೆರವಣಿಗೆ ನಡೆಸಿದ ಅವರು, ಸಿಇಒ ದರ್ಶನ್ ಎಚ್.ವಿ. ಅವರಿಗೆ ಮನವಿ ಸಲ್ಲಿಸಿದರು. ನಂತರ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ ಕಚೇರಿಗೆ ತೆರಳಿ ಅವರಿಗೂ ಹಕ್ಕೊತ್ತಾಯ ಮನವಿ ನೀಡಿದರು.</p>.<p>‘ಪಟ್ಟಣ ಪಂಚಾಯಿತಿಗಳಾಗುವುದಕ್ಕಿಂತ ಮುಂಚೆ ಆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೂರಾರು ಮಂದಿ ಉದ್ಯೋಗ ಚೀಟಿ ಪಡೆದು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ, ಮೇಲ್ದರ್ಜೆಗೇರಿದ ಕಾರಣಕ್ಕೆ ಅವರಿಂದ ಕೆಲಸ ಕಿತ್ತುಕೊಳ್ಳುವುದು ಸರಿಯಲ್ಲ. ನೂರಾರು ಕುಟುಂಬಗಳಿಗೆ ಆಸರೆಯಾಗಿರುವ ಯೋಜನೆಯನ್ನು ಅಲ್ಲಿ ಸ್ಥಗಿತಗೊಳಿಸುವುದು ಸಮಂಜಸವಲ್ಲ’ ಎಂದು ತಿಳಿಸಿದರು.</p>.<p>‘ಪೀರನವಾಡಿ ವ್ಯಾಪ್ತಿಯಲ್ಲಿ 500 ಮಂದಿ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿದ್ದಾರೆ. ಅವರಿಗೆ ಯಾವುದೇ ರೀತಿ ಅನ್ಯಾಯ ಆಗಲು ಬಿಡಬಾರದು. ಆ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲೂ ಖಾತ್ರಿ ಯೋಜನೆ ಮುಂದುವರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸಂಘಟನೆಯ ಸಂಸ್ಥಾಪಕ ಸದಸ್ಯ ದಿಲೀಪ ಕಾಮತ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ತಾಲ್ಲೂಕಿನ ಪೀರನವಾಡಿ ಸೇರಿದಂತೆ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದರೂ ಅಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನಿಲ್ಲಿಸಬಾರದು’ ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯವರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾ ಪಂಚಾಯಿತಿವರೆಗೆ ಮೆರವಣಿಗೆ ನಡೆಸಿದ ಅವರು, ಸಿಇಒ ದರ್ಶನ್ ಎಚ್.ವಿ. ಅವರಿಗೆ ಮನವಿ ಸಲ್ಲಿಸಿದರು. ನಂತರ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ ಕಚೇರಿಗೆ ತೆರಳಿ ಅವರಿಗೂ ಹಕ್ಕೊತ್ತಾಯ ಮನವಿ ನೀಡಿದರು.</p>.<p>‘ಪಟ್ಟಣ ಪಂಚಾಯಿತಿಗಳಾಗುವುದಕ್ಕಿಂತ ಮುಂಚೆ ಆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೂರಾರು ಮಂದಿ ಉದ್ಯೋಗ ಚೀಟಿ ಪಡೆದು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ, ಮೇಲ್ದರ್ಜೆಗೇರಿದ ಕಾರಣಕ್ಕೆ ಅವರಿಂದ ಕೆಲಸ ಕಿತ್ತುಕೊಳ್ಳುವುದು ಸರಿಯಲ್ಲ. ನೂರಾರು ಕುಟುಂಬಗಳಿಗೆ ಆಸರೆಯಾಗಿರುವ ಯೋಜನೆಯನ್ನು ಅಲ್ಲಿ ಸ್ಥಗಿತಗೊಳಿಸುವುದು ಸಮಂಜಸವಲ್ಲ’ ಎಂದು ತಿಳಿಸಿದರು.</p>.<p>‘ಪೀರನವಾಡಿ ವ್ಯಾಪ್ತಿಯಲ್ಲಿ 500 ಮಂದಿ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿದ್ದಾರೆ. ಅವರಿಗೆ ಯಾವುದೇ ರೀತಿ ಅನ್ಯಾಯ ಆಗಲು ಬಿಡಬಾರದು. ಆ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲೂ ಖಾತ್ರಿ ಯೋಜನೆ ಮುಂದುವರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸಂಘಟನೆಯ ಸಂಸ್ಥಾಪಕ ಸದಸ್ಯ ದಿಲೀಪ ಕಾಮತ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>