‘ಪಟ್ಟಣ ಪಂಚಾಯಿತಿಗಳಾಗುವುದಕ್ಕಿಂತ ಮುಂಚೆ ಆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೂರಾರು ಮಂದಿ ಉದ್ಯೋಗ ಚೀಟಿ ಪಡೆದು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ, ಮೇಲ್ದರ್ಜೆಗೇರಿದ ಕಾರಣಕ್ಕೆ ಅವರಿಂದ ಕೆಲಸ ಕಿತ್ತುಕೊಳ್ಳುವುದು ಸರಿಯಲ್ಲ. ನೂರಾರು ಕುಟುಂಬಗಳಿಗೆ ಆಸರೆಯಾಗಿರುವ ಯೋಜನೆಯನ್ನು ಅಲ್ಲಿ ಸ್ಥಗಿತಗೊಳಿಸುವುದು ಸಮಂಜಸವಲ್ಲ’ ಎಂದು ತಿಳಿಸಿದರು.