‘ಸರ್ಕಾರದ ಧೋರಣೆ ಖಂಡಿಸಿ ಕೊಪ್ಪಳ, ಬೀದರ್, ವಿಜಯಪುರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದ್ದೇವೆ. ಅದೇ ರೀತಿ ಬೆಳಗಾವಿಯಲ್ಲೂ ಪ್ರತಿಭಟಿಸಲಾಗುವುದು. ಆಗಲೂ ಸರಕಾರ ಸ್ಪಂದಿಸದಿದ್ದರೆ ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿ ಕಚೇರಿ ಎದುರು, ಕುರಿಗಳ ಕಳೆಬರ ಇಟ್ಟು ಪ್ರತಿಭಟಿಸಲಾಗುವುದು. ಬಳಿಕವೂ ಬೇಡಿಕೆ ಈಡೇರಿಸದಿದ್ದರೆ ಕುರಿಗಾಹಿಗಳಿಂದ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.