‘ರಾಜ್ಯದಲ್ಲಿ 30 ಲಕ್ಷಕ್ಕಿಂತಲೂ ಹೆಚ್ಚಿನ ದೇವಾಂಗ ಸಮಾಜದವರು ಇದ್ದಾರೆ. ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಳೇಭಾವಿ ಗ್ರಾಮದಲ್ಲಿ ಅಧಿಕವಾಗಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳು ಮತ್ತು ಬೆಳಗಾವಿ ನಗರದಲ್ಲೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅವರು ಆರ್ಥಿಕ ಮತ್ತು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದಾರೆ. ಕೊರೊನಾ ಸಂದರ್ಭದಲ್ಲಿ ಮತ್ತು ಹಿಂದಿನ 2 ವರ್ಷ ಅಪ್ಪಳಿಸಿದ ಪ್ರವಾಹದಿಂದಾಗಿ ಅವರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಉದ್ಯೋಗ ಮಾಡಲೂ ಆಗದೆ, ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆಯೂ ಸಿಗದೆ ಪರದಾಡುವಂತಾಗಿದೆ. ಆದ್ದರಿಂದ ಅವರಿಗೆ ಸ್ಪಂದಿಸಬೇಕು’ ಎಂದು ಕೋರಿದರು.