<p><strong>ಹಂದಿಗುಂದ (ಬೆಳಗಾವಿ ಜಿಲ್ಲೆ): </strong>ಇಲ್ಲಿ ಸಂಚಾರಿ ಆರೋಗ್ಯ ಘಟಕವಿದ್ದು, ಅದನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಕೂಗಿಗೆ ಮನ್ನಣೆ ಸಿಕ್ಕಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಾದರೂ ಸೌಲಭ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ನೆರವಾಗಬೇಕು ಎಂಬ ಆಗ್ರಹ ಕೇಳಿಬಂದಿದೆ.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮನಗೌಡ ಪಾಟೀಲ ಅವರ ಪ್ರಯತ್ನದಿಂದ ಘಟಕ ಸ್ಥಾಪನೆಯಾಗಿದೆ. 10 ವರ್ಷಗಳಿಂದಲೂ ಮೇಲ್ದರ್ಜೇಗೆ ಏರದೆ ಜನರಿಗೆ ಹೆಚ್ಚಿನ ವೈದ್ಯಕೀಯ ಸೇವೆ ಸಿಗುತ್ತಿಲ್ಲ. ಹೋದ ವರ್ಷ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ₹ 1 ಲಕ್ಷ ವಂತಿಕೆಯನ್ನು ಆರೋಗ್ಯ ಇಲಾಖೆಗೆ ಠೇವಣಿಯಾಗಿ ನೀಡಿ, ಸಂಬಂಧಿಸಿದ ಸಚಿವರಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಕ್ರಮ ಕೈಗೊಳ್ಳದಿರುವುದು ಇಲ್ಲಿನವರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಸದ್ಯ ಈ ಆರೋಗ್ಯ ಕೇಂದ್ರದಲ್ಲಿ ಫಾರ್ಮಸಿಸ್ಟ್, ದ್ವಿತೀಯ ದರ್ಜೆ ಸಹಾಯಕ ಹಾಗೂ ಡಿ ಗ್ರೂಪ್ ನೌಕರ ಇದ್ದಾರೆ. ವೈದ್ಯಾಧಿಕಾರಿ, ಕಿರಿಯ ಆರೋಗ್ಯ ಮಹಿಳಾ ಸಹಾಯಕಿ, ಕಿರಿಯ ಆರೋಗ್ಯ ಪುರುಷ ಸಹಾಯಕ, ಆಂಬುಲೆನ್ಸ್ ಚಾಲಕ ಹುದ್ದೆಗಳು ಖಾಲಿ ಇವೆ. ಗಾಯರಾಣ ಜಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ 2 ಎಕರೆ ಜಮೀನು ಮಂಜೂರಾತಿಗಾಗಿ ತಹಶೀಲ್ದಾರ್ ಮೂಲಕ ಕಂದಾಯ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಿಡಿಒ ಸವಿತಾ ಚಿನಗುಂಡಿ ಹಾಗೂ ಗ್ರಾ.ಪಂ. ಅಧ್ಯಕ್ಷ ಶ್ರೀಶೈಲ ಪಾಟೀಲ ತಿಳಿಸಿದರು.</p>.<p>‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಆಯುಕ್ತರಿಗೆ 2019ರಲ್ಲೇ ಮನವಿ ಸಲ್ಲಿಸಲಾಗಿದೆ. ಅದರಿಂದ ಪ್ರಯೋಜನವಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮೇ 13ರಂದು ಮನವಿ ಸಲ್ಲಿಸಲಾಗುವುದು. ದಿನದ 24 ಗಂಟೆಯೂ ಆರೋಗ್ಯ ಸೇವೆ ಸಿಕ್ಕರೆ ಈ ಭಾಗದ ಜನರಿಗೆ ಬಹಳ ಅನುಕೂಲವಾಗಲಿದೆ’ ಎಂದು ಮುಖಂಡ ರಾಮನಗೌಡ ಪಾಟೀಲ ತಿಳಿಸಿದರು.</p>.<p>‘ಜನರ ಅಪೇಕ್ಷೆಯಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಆಗಲಿದೆ. ಶಾಸಕರ ಪ್ರಯತ್ನದಿಂದ ಬೇಡಿಕೆ ಈಡೇರುವುದು ಖಚಿತ’ ಎಂದು ಬಿಜೆಪಿ ಕುಡಚಿ ಮಂಡಲದ ಅಧ್ಯಕ್ಷ ಮಲ್ಲಿಕಾರ್ಜುನ ಖಾನಗೌಡ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂದಿಗುಂದ (ಬೆಳಗಾವಿ ಜಿಲ್ಲೆ): </strong>ಇಲ್ಲಿ ಸಂಚಾರಿ ಆರೋಗ್ಯ ಘಟಕವಿದ್ದು, ಅದನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಕೂಗಿಗೆ ಮನ್ನಣೆ ಸಿಕ್ಕಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಾದರೂ ಸೌಲಭ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ನೆರವಾಗಬೇಕು ಎಂಬ ಆಗ್ರಹ ಕೇಳಿಬಂದಿದೆ.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮನಗೌಡ ಪಾಟೀಲ ಅವರ ಪ್ರಯತ್ನದಿಂದ ಘಟಕ ಸ್ಥಾಪನೆಯಾಗಿದೆ. 10 ವರ್ಷಗಳಿಂದಲೂ ಮೇಲ್ದರ್ಜೇಗೆ ಏರದೆ ಜನರಿಗೆ ಹೆಚ್ಚಿನ ವೈದ್ಯಕೀಯ ಸೇವೆ ಸಿಗುತ್ತಿಲ್ಲ. ಹೋದ ವರ್ಷ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ₹ 1 ಲಕ್ಷ ವಂತಿಕೆಯನ್ನು ಆರೋಗ್ಯ ಇಲಾಖೆಗೆ ಠೇವಣಿಯಾಗಿ ನೀಡಿ, ಸಂಬಂಧಿಸಿದ ಸಚಿವರಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಕ್ರಮ ಕೈಗೊಳ್ಳದಿರುವುದು ಇಲ್ಲಿನವರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಸದ್ಯ ಈ ಆರೋಗ್ಯ ಕೇಂದ್ರದಲ್ಲಿ ಫಾರ್ಮಸಿಸ್ಟ್, ದ್ವಿತೀಯ ದರ್ಜೆ ಸಹಾಯಕ ಹಾಗೂ ಡಿ ಗ್ರೂಪ್ ನೌಕರ ಇದ್ದಾರೆ. ವೈದ್ಯಾಧಿಕಾರಿ, ಕಿರಿಯ ಆರೋಗ್ಯ ಮಹಿಳಾ ಸಹಾಯಕಿ, ಕಿರಿಯ ಆರೋಗ್ಯ ಪುರುಷ ಸಹಾಯಕ, ಆಂಬುಲೆನ್ಸ್ ಚಾಲಕ ಹುದ್ದೆಗಳು ಖಾಲಿ ಇವೆ. ಗಾಯರಾಣ ಜಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ 2 ಎಕರೆ ಜಮೀನು ಮಂಜೂರಾತಿಗಾಗಿ ತಹಶೀಲ್ದಾರ್ ಮೂಲಕ ಕಂದಾಯ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಿಡಿಒ ಸವಿತಾ ಚಿನಗುಂಡಿ ಹಾಗೂ ಗ್ರಾ.ಪಂ. ಅಧ್ಯಕ್ಷ ಶ್ರೀಶೈಲ ಪಾಟೀಲ ತಿಳಿಸಿದರು.</p>.<p>‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಆಯುಕ್ತರಿಗೆ 2019ರಲ್ಲೇ ಮನವಿ ಸಲ್ಲಿಸಲಾಗಿದೆ. ಅದರಿಂದ ಪ್ರಯೋಜನವಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮೇ 13ರಂದು ಮನವಿ ಸಲ್ಲಿಸಲಾಗುವುದು. ದಿನದ 24 ಗಂಟೆಯೂ ಆರೋಗ್ಯ ಸೇವೆ ಸಿಕ್ಕರೆ ಈ ಭಾಗದ ಜನರಿಗೆ ಬಹಳ ಅನುಕೂಲವಾಗಲಿದೆ’ ಎಂದು ಮುಖಂಡ ರಾಮನಗೌಡ ಪಾಟೀಲ ತಿಳಿಸಿದರು.</p>.<p>‘ಜನರ ಅಪೇಕ್ಷೆಯಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಆಗಲಿದೆ. ಶಾಸಕರ ಪ್ರಯತ್ನದಿಂದ ಬೇಡಿಕೆ ಈಡೇರುವುದು ಖಚಿತ’ ಎಂದು ಬಿಜೆಪಿ ಕುಡಚಿ ಮಂಡಲದ ಅಧ್ಯಕ್ಷ ಮಲ್ಲಿಕಾರ್ಜುನ ಖಾನಗೌಡ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>