<p><strong>ಹುಕ್ಕೇರಿ:</strong> ‘ಜಿಲ್ಲೆಯಲ್ಲಿ ಬಿಜೆಪಿ ಸುಭದ್ರವಾಗಿಸುವಲ್ಲಿ ದಿ. ಉಮೇಶ್ ಕತ್ತಿ ಮತ್ತು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಅವರದ್ದು ಪ್ರಮುಖ ಪಾತ್ರವಿದೆ. ರಮೇಶ್ ಕತ್ತಿ ಅವರಿಗೆ ಚಿಕ್ಕೋಡಿ ಅಥವಾ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೊಡಬೇಕು’ ಎಂದು ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಕೆ.ಮಗೆನ್ನವರ ಒತ್ತಾಯಿಸಿದರು.</p>.<p>ತಾಲ್ಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಕತ್ತಿ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಪಕ್ಷದ ವರಿಷ್ಠರು ನಮ್ಮ ಬೇಡಿಕೆಗೆ ಸ್ಪಂದಿಸಬೇಕು’ ಎಂದರು. </p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಮೀರಾಸಾಬ ಮುಲ್ತಾನಿ ಮಾತನಾಡಿ, ‘ರಮೇಶ್ ಕತ್ತಿಗೆ ಟಿಕೆಟ್ ನೀಡಿದಲ್ಲಿ ಈ ಭಾಗದ ಮುಸ್ಲಿಮರು ಅವರ ಪರ ಮತ ಚಲಾಯಿಸುವರು’ ಎಂದರು.</p>.<p>ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕ ಬಸಗೌಡ ಮಗೆನ್ನವರ, ಪಿಕೆಪಿಎಸ್ ಅಧ್ಯಕ್ಷ ಶಶಿಕಾಂತ ದೊಡಲಿಂಗನವರ, ಮುಖಂಡರಾದ ಕೆಂಪಣ್ಣ ವಾಸೇದಾರ್, ಅರುಣ ಹುದ್ದಾರ, ಜಿನಗೌಡ ಇಮಗೌಡನವರ, ಕಲಗೌಡ ಮಲಗೌಡನವರ, ಮಹಾಂತೇಶ ಮಗೆನ್ನವರ, ಅಪ್ಪಣ್ಣ ಬಡಿಗೇರ್, ಬಿ.ಎ.ಇಮಗೌಡನವರ, ದಸ್ತಗೀರ ತಾಸೀಲ್ದಾರ್, ಮಹಾಂತೇಶ ನಾಗನೂರಿ, ನಿಂಗಪ್ಪ ಹಸರಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ‘ಜಿಲ್ಲೆಯಲ್ಲಿ ಬಿಜೆಪಿ ಸುಭದ್ರವಾಗಿಸುವಲ್ಲಿ ದಿ. ಉಮೇಶ್ ಕತ್ತಿ ಮತ್ತು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಅವರದ್ದು ಪ್ರಮುಖ ಪಾತ್ರವಿದೆ. ರಮೇಶ್ ಕತ್ತಿ ಅವರಿಗೆ ಚಿಕ್ಕೋಡಿ ಅಥವಾ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೊಡಬೇಕು’ ಎಂದು ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಕೆ.ಮಗೆನ್ನವರ ಒತ್ತಾಯಿಸಿದರು.</p>.<p>ತಾಲ್ಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಕತ್ತಿ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಪಕ್ಷದ ವರಿಷ್ಠರು ನಮ್ಮ ಬೇಡಿಕೆಗೆ ಸ್ಪಂದಿಸಬೇಕು’ ಎಂದರು. </p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಮೀರಾಸಾಬ ಮುಲ್ತಾನಿ ಮಾತನಾಡಿ, ‘ರಮೇಶ್ ಕತ್ತಿಗೆ ಟಿಕೆಟ್ ನೀಡಿದಲ್ಲಿ ಈ ಭಾಗದ ಮುಸ್ಲಿಮರು ಅವರ ಪರ ಮತ ಚಲಾಯಿಸುವರು’ ಎಂದರು.</p>.<p>ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕ ಬಸಗೌಡ ಮಗೆನ್ನವರ, ಪಿಕೆಪಿಎಸ್ ಅಧ್ಯಕ್ಷ ಶಶಿಕಾಂತ ದೊಡಲಿಂಗನವರ, ಮುಖಂಡರಾದ ಕೆಂಪಣ್ಣ ವಾಸೇದಾರ್, ಅರುಣ ಹುದ್ದಾರ, ಜಿನಗೌಡ ಇಮಗೌಡನವರ, ಕಲಗೌಡ ಮಲಗೌಡನವರ, ಮಹಾಂತೇಶ ಮಗೆನ್ನವರ, ಅಪ್ಪಣ್ಣ ಬಡಿಗೇರ್, ಬಿ.ಎ.ಇಮಗೌಡನವರ, ದಸ್ತಗೀರ ತಾಸೀಲ್ದಾರ್, ಮಹಾಂತೇಶ ನಾಗನೂರಿ, ನಿಂಗಪ್ಪ ಹಸರಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>