ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉತ್ತರ ಕರ್ನಾಟಕದ ಅಭಿವೃದ್ಧಿಗೂ ಆದ್ಯತೆ ಕೊಡಿ’

Last Updated 29 ಜುಲೈ 2021, 15:54 IST
ಅಕ್ಷರ ಗಾತ್ರ

ಹುಕ್ಕೇರಿ: ‘ಕಾವೇರಿ ಜಲಾನಯನ ಪ್ರದೇಶಕ್ಕೆ ಆದ್ಯತೆ ಕೊಟ್ಟಂತೆ ಕೃಷ್ಣಾ ಜಲಾನಯನ ಪ್ರದೇಶಕ್ಕೂ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದ್ಯತೆ ಕೊಟ್ಟು ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಬೇಕು’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಒತ್ತಾಯಿಸಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕವು ದಕ್ಷಿಣ ಕರ್ನಾಟಕದಷ್ಟು ಅಭಿವೃದ್ಧಿ ಹೊಂದಿಲ್ಲ. ದಕ್ಷಿಣ ಕರ್ನಾಟಕದ ಅಧಿಕಾರಿಗಳಿಗೆ ಉತ್ತರ ಕರ್ನಾಟಕದೆಡೆ ವರ್ಗಾವಣೆಯಾದರೆ ಬರುವುದೇ ಇಲ್ಲ. ಏನಾದರೂ ಮಾಡಿ ಅಲ್ಲಿಯೆ ಉಳಿಯಲು ಪ್ರಯತ್ನಿಸುತ್ತಾರೆ. ಇದರರ್ಥವನ್ನು ಈ ಭಾಗದ ಎಲ್ಲ ಜನರು ಅರಿತುಕೊಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಬೇಡವಾದಲ್ಲಿ ಇತ್ತ ಎಲ್ಲ ಸೌಲಭ್ಯ ಒದಗಿಸಲು ಮುಂದಾಗಬೇಕು’ ಎಂದರು.

‘ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಂದೆಯವರೂ ಮುಖ್ಯಮಂತ್ರಿ ಆಗಿದ್ದರು. ಈ ಭಾಗದ ಅಭಿವೃದ್ಧಿಗೆ ಅವರ ಕೆಲವೊಂದು ಕನಸುಗಳು ನನಸಾಗಿಲ್ಲ. ಅವುಗಳನ್ನು ಈಡೇರಿಸುವಲ್ಲಿ ಮುಖ್ಯಮಂತ್ರಿ ಮನಸ್ಸು ಮಾಡಬೇಕು’ ಎಂದು ಕೋರಿದರು.

ಪುರಸಭೆ ಅಧ್ಯಕ್ಷ ಅಣ್ಣಾಗೌಡ ಪಾಟೀಲ, ಉಪಾಧ್ಯಕ್ಷ ಆನಂದ ಗಂಧ, ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT