‘ಈ ವೃತ್ತಿಯನ್ನು ಸಾವಿರಾರು ಮಂದಿ ಅವಲಂಬಿಸಿದ್ದೇವೆ. ಕೋವಿಡ್–19 ಲಾಕ್ಡೌನ್ನಿಂದಾಗಿ ಸಭೆ, ಸಮಾರಂಭ, ಮದುವೆ, ಜಯಂತಿ, ಜಾತ್ರೆ ಮೊದಲಾದ ಕಾರ್ಯಕ್ರಮಗಳಿಗೆ ಹಲವು ತಿಂಗಳವರೆಗೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದಾಗಿ ದುಡಿಮೆ ಇಲ್ಲದೆ, ಗಳಿಕೆಯೂ ಇಲ್ಲದೆ ನಾವು ಬಹಳ ಸಂಕಷ್ಟಕ್ಕೆ ಸಿಲುಕಿದ್ದೇವೆ. ಸರ್ಕಾರದ ಯಾವುದೇ ಸಹಾಯವನ್ನೂ ಬಯಸದೆ ಕಾಯಕವನ್ನೇ ನಂಬಿ ಬದುಕುತ್ತಿದ್ದೆ ನಮಗೆ ಕೊರೊನಾ ವೈರಸ್ ಸೃಷ್ಟಿಸಿದ ಬಿಕ್ಕಟ್ಟು ಭಾರಿ ಬರೆ ಎಳೆದಿದೆ. ಈಗಲೂ ಕೆಲಸ ಇಲ್ಲದಂತಾಗಿದೆ. ಪರಿಣಾಮ ಜೀವನ ನಿರ್ವಹಣೆಯೇ ದುಸ್ತರವಾಗಿದೆ’ ಎಂದು ತಿಳಿಸಿದರು.