‘ಲಾಕ್ಡೌನ್ ತೆರವಾದರೂ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ. ಆಷಾಢ ಮಾಸದಲ್ಲಿ ಪಂಢರಪುರದ ವಿಠ್ಠಲ ದೇವರಿಗೆ ವಿಶೇಷ ಪೂಜೆ–ಪುನಸ್ಕಾರಗಳು ನಡೆಯುತ್ತವೆ. ಭಜನೆ–ಪ್ರಾರ್ಥನೆ ನೆರವೇರುತ್ತದೆ. ಅಲ್ಲಿಗೆ ಭಕ್ತರಿಗೆ ಪ್ರವೇಶ ನೀಡುವಂತಾಗಲು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.