ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಕಿತ್ತೂರು ಉತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಂದರ್ಭ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಮುಖಂಡರು, ‘ಗಡಿ ನಾಡಿನಲ್ಲಿ ನಡೆಯುವ ರಾಜ್ಯೋತ್ಸವ ವಿಶೇಷವಾಗಿದೆ. ಕೋವಿಡ್ ನೆಪ ಹೇಳದೆ ಅದ್ಧೂರಿಯಾಗಿ ನಡೆಸಲು ಅವಕಾಶ ಕಲ್ಪಿಸಬೇಕು’ ಎಂದು ಕೋರಿದರು.