<p><strong>ಬೆಳಗಾವಿ: </strong>‘ಶಾಲಾ-ಕಾಲೇಜುಗಳಲ್ಲಿ ಕ್ರೀಡಾಕೂಟಗಳ ಆಯೋಜನೆಗೆ ಅನುಮತಿ ನೀಡಬೇಕು’ ಎಂದು ಒತ್ತಾಯಿಸಿ ಕ್ರೀಡಾಪಟುಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಕೊರೊನಾ ಹಾವಳಿ ತಗ್ಗಿದ್ದರಿಂದ ಶಾಲಾ-ಕಾಲೇಜು ತರಗತಿಗಳು ಆರಂಭಗೊಂಡಿವೆ. ರಾಜಕೀಯ ಸಮಾವೇಶ, ಸಭೆ– ಸಮಾರಂಭಗಳ ಆಯೋಜನೆಗೆ ಅನುಮತಿ ನೀಡಿರುವ ಸರ್ಕಾರ, ವೈರಸ್ ಹರಡುವಿಕೆ ನೆಪವೊಡ್ಡಿ ಕ್ರೀಡಾಕೂಟ ಸಂಘಟಿಸಲು ಅವಕಾಶ ನೀಡುತ್ತಿಲ್ಲ’ ಎಂದು ದೂರಿದರು.</p>.<p>‘ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕ್ರೀಡಾಕೂಟಗಳ ಆಯೋಜನೆಗೆ ಅನುಮತಿ ನೀಡಬೇಕು. ಹತ್ತಾರು ಪ್ರತಿಭೆಗಳನ್ನು ಬೆಳಕಿಗೆ ತರಲು ಪ್ರಯತ್ನಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸುರೇಶ, ಯೋಗೇಶ, ಸ್ವಪ್ನಿಲ್, ಸಹನಾ, ಕಾವ್ಯಾ ಇತರರಿದ್ದರು.</p>.<p class="Briefhead"><strong>ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ</strong></p>.<p>ಬೆಳಗಾವಿ: ತಾಲ್ಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ಜಿಲ್ಲಾಧಿಕಾರಿ ಶುಕ್ರವಾರ ಮನವಿ ಸಲ್ಲಿಸಿದರು.</p>.<p>‘ಡಿ.21, 22ರಂದು ಗ್ರಾಮದಲ್ಲಿ ಮಸನಾಯಿ ಜಾತ್ರಾ ಮಹೋತ್ಸವ ಜರುಗಲಿದೆ. ಆದರೆ, ಇಲ್ಲಿನ ಕಾಮಗಾರಿ ಮಂದಗತಿಯಲ್ಲಿ ಸಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಇದನ್ನು ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಗ್ರಾ.ಪಂ. ಅಧ್ಯಕ್ಷ ಯಲ್ಲಪ್ಪ ಪಾಟೀಲ, ಉಪಾಧ್ಯಕ್ಷೆ ಜ್ಯೋತಿ ಪಾಟೀಲ, ರಾಧಾ ಕಾಂಬಳೆ, ಪ್ರಶಾಂತ ಪಾಟೀಲ, ವೀಣಾ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಶಾಲಾ-ಕಾಲೇಜುಗಳಲ್ಲಿ ಕ್ರೀಡಾಕೂಟಗಳ ಆಯೋಜನೆಗೆ ಅನುಮತಿ ನೀಡಬೇಕು’ ಎಂದು ಒತ್ತಾಯಿಸಿ ಕ್ರೀಡಾಪಟುಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಕೊರೊನಾ ಹಾವಳಿ ತಗ್ಗಿದ್ದರಿಂದ ಶಾಲಾ-ಕಾಲೇಜು ತರಗತಿಗಳು ಆರಂಭಗೊಂಡಿವೆ. ರಾಜಕೀಯ ಸಮಾವೇಶ, ಸಭೆ– ಸಮಾರಂಭಗಳ ಆಯೋಜನೆಗೆ ಅನುಮತಿ ನೀಡಿರುವ ಸರ್ಕಾರ, ವೈರಸ್ ಹರಡುವಿಕೆ ನೆಪವೊಡ್ಡಿ ಕ್ರೀಡಾಕೂಟ ಸಂಘಟಿಸಲು ಅವಕಾಶ ನೀಡುತ್ತಿಲ್ಲ’ ಎಂದು ದೂರಿದರು.</p>.<p>‘ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕ್ರೀಡಾಕೂಟಗಳ ಆಯೋಜನೆಗೆ ಅನುಮತಿ ನೀಡಬೇಕು. ಹತ್ತಾರು ಪ್ರತಿಭೆಗಳನ್ನು ಬೆಳಕಿಗೆ ತರಲು ಪ್ರಯತ್ನಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸುರೇಶ, ಯೋಗೇಶ, ಸ್ವಪ್ನಿಲ್, ಸಹನಾ, ಕಾವ್ಯಾ ಇತರರಿದ್ದರು.</p>.<p class="Briefhead"><strong>ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ</strong></p>.<p>ಬೆಳಗಾವಿ: ತಾಲ್ಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ಜಿಲ್ಲಾಧಿಕಾರಿ ಶುಕ್ರವಾರ ಮನವಿ ಸಲ್ಲಿಸಿದರು.</p>.<p>‘ಡಿ.21, 22ರಂದು ಗ್ರಾಮದಲ್ಲಿ ಮಸನಾಯಿ ಜಾತ್ರಾ ಮಹೋತ್ಸವ ಜರುಗಲಿದೆ. ಆದರೆ, ಇಲ್ಲಿನ ಕಾಮಗಾರಿ ಮಂದಗತಿಯಲ್ಲಿ ಸಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಇದನ್ನು ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಗ್ರಾ.ಪಂ. ಅಧ್ಯಕ್ಷ ಯಲ್ಲಪ್ಪ ಪಾಟೀಲ, ಉಪಾಧ್ಯಕ್ಷೆ ಜ್ಯೋತಿ ಪಾಟೀಲ, ರಾಧಾ ಕಾಂಬಳೆ, ಪ್ರಶಾಂತ ಪಾಟೀಲ, ವೀಣಾ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>