ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕನ್ನಡ ಧ್ವಜವನ್ನು ರಾಷ್ಟ್ರ ಧ್ವಜಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಹಾರಿಸಲು ಕಾನೂನಿನಲ್ಲಿ ಯಾವುದೇ ತೊಡುಕು ಇಲ್ಲವೆಂದು ಹೈಕೋರ್ಟ್ ಅಡ್ವೊಕೇಟ್ ಜನರಲ್ 2016ರಂದು ಲಿಖಿತ ಅಭಿಪ್ರಾಯ ಕೊಟ್ಟಿದ್ದಾರೆ. ಇದಾದ ನಂತರ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯದಂತೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ಕೊಟ್ಟಿದ್ದರು. ಇದಕ್ಕೆ ಸರ್ಕಾರದ ಕಾರ್ಯದರ್ಶಿ ಕೂಡ ಒಪ್ಪಿಗೆ ಸೂಚಿಸಿದ್ದರು. ಸರ್ಕಾರವೇ ಸಂಪೂರ್ಣವಾಗಿ ಒಪ್ಪಿಗೆ ಕೊಟ್ಟಿರುವ ಬಗ್ಗೆ ದಾಖಲೆಗಳಿವೆ’ ಎಂದು ಮಾಹಿತಿ ನೀಡಿದರು.