‘ರಾಯಣ್ಣನ ಜಯಂತಿಯ ದಿನವಾದ ಆ.15ರಂದು ಅಭಿಮಾನಿಗಳು ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದರು. ತಕ್ಷಣವೇ ಪೊಲೀಸರು ಪ್ರತಿಮೆ ತೆರವುಗೊಳಿಸಿ ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಸ್ವಾತಂತ್ರ್ಯ ಹೋರಾಟಗಾರನನ್ನು ಅವಮಾನಿಸಲಾಗಿದೆ. ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು. ಗೌರವಪೂರ್ವಕವಾಗಿ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.