ಗೋಕಾಕ: ಲಿಂಗಾಯತ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ಲಿಂಗಾಯತ ಸಮಾಜದವರು ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಬಸವೇಶ್ವರ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆ ನಡೆಸಿದರು.
‘2002ರವರೆಗೆ ಕಂದಾಯ ಇಲಾಖೆಯವರು ಲಿಂಗಾಯತ ಎಂದು ಜಾತಿ ಪ್ರಮಾಣಪತ್ರ ನೀಡುತ್ತಿದ್ದರು. ಬಳಿಕ ವೀರಶೈವ-ಲಿಂಗಾಯತ ಎಂದು ನಮೂದಿಸುತ್ತಿದ್ದಾರೆ. ಈ ಮೂಲಕ ನಮಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ಬಸನಗೌಡ ಪಾಟೀಲ, ಮಲ್ಲಿಕಾರ್ಜುನ ಈಟಿ, ವಿವೇಕ ಜತ್ತಿ, ಸಂಜಯ ಪಾಟೀಲ, ಚನ್ನಬಸವ ಬಿಜಲಿ, ಶಕುಂತಲಾ ಕಟ್ಟಿ ಇದ್ದರು.