ತಲ್ಲೂರ, ಆಲದಕಟ್ಟಿ ಕೆ.ಎಂ., ಜಾಲಿಕಟ್ಟಿ, ಜೀವಾಪೂರ, ಸೋಮಾಪೂರ, ನುಗ್ಗಾನಟ್ಟಿ ಸೇರಿದಂತೆ ಅನೇಕ ಗ್ರಾಮಕ್ಕೆ ಸರಿಯಾಗಿ ಬಸ್ ಸೌಕರ್ಯವಿಲ್ಲ. ಕೊರೊನಾ ನಂತರ ವಿವಿಧ ಕಾರಣಗಳನ್ನು ನೀಡಿ ಮೊದಲಿದ್ದ ಮಾರ್ಗಗಳ ಬಸ್ಗಳ ಕಾರ್ಯಾಚರಣೆ ನಡೆಯುತ್ತಿಲ್ಲ. ವಿದ್ಯಾರ್ಥಿಗಳು ಅನೇಕ ಬಾರಿ ಯರಗಟ್ಟಿ ಹಾಗೂ ಬೈಲಹೊಂಗಲ ಎನ್ಡಬ್ಲ್ಯುಕೆಆರ್ಟಿಸಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಲಾಗುತ್ತಿದೆ.