<p><strong>ಕೌಜಲಗಿ:</strong> ‘ರೈತರ ಕಬ್ಬಿನ ಬಾಕಿ ₹ 21 ಕೋಟಿ ಪಾವತಿಸಲು ಬಾಗಲಕೋಟೆ ಜಿಲ್ಲಾಧಿಕಾರಿ ಮಧ್ಯಸ್ಥಿಕೆ ವಹಿಸಬೇಕು’ ಎಂದು ರೈತ ಮುಖಂಡ ಅರವಿಂದ ದಳವಾಯಿ ಒತ್ತಾಯಿಸಿದರು.</p>.<p>ಇಲ್ಲಿನ ದಳವಾಯಿ ತೋಟದಲ್ಲಿ ನಡೆದ ಸಾವರಿನ್ ಶುಗರ್ಸ್ಗೆ ಕಬ್ಬು ಪೂರೈಸಿದ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸಾವರಿನ್ ಕಾರ್ಖಾನೆಯ ಚರಾಸ್ತಿ-ಸ್ಥಿರಾಸ್ತಿಗಳನ್ನು ಬ್ಯಾಂಕಿನವರು ವಶಪಡಿಸಿದ್ದಾರೆ. ರೈತರ ಕಬ್ಬಿನ ಬಾಕಿ ಹಣ ಪಾವತಿಸಿದ ಮೇಲೆ ಕಾರ್ಖಾನೆ ಆಸ್ತಿ ಹರಾಜು ಮಾಡಲು ಬಾಗಲಕೋಟೆ ಜಿಲ್ಲಾಧಿಕಾರಿ ಆದೇಶಿಸಿದರೂ ಬ್ಯಾಂಕ್ನವರು ಇದುವರೆಗೂ ರೈತರಿಗೆ ಬಾಕಿ ಹಣ ಪಾವತಿಸಿಲ್ಲ. ಇದನ್ನು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.</p>.<p>ರೈತರಿಗೆ ನ್ಯಾಯ ದೊರೆಯಲು ವಿಳಂಬವಾದರೆ ಬೆಂಗಳೂರಿನ ಸಕ್ಕರೆ ಆಯುಕ್ತರ ಕಚೇರಿ ಮುಂದೆ ಸೆ.21ರಂದು ಧರಣಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ರೈತ ಮುಖಂಡರಾದ ಗಂಗಾಧರ ಮೇಟಿ, ಶ್ರೀಶೈಲ ಅಂಗಡಿ ಮಾತನಾಡಿದರು. ರೈತರಾದ ರಮಜಾನ್ ಹಕ್ಕಿ, ಸಿದ್ದಪ್ಪ ಸಣ್ಣಕ್ಕಿ, ಶಿವಪ್ಪ ಬಳೋಲದಾರ, ರಾಮಣ್ಣ ಗೂರನವರ ನೀಲಪ್ಪ ಯಲಿಗಾರ, ಈರಪ್ಪ ಸಸಾಲಟ್ಟಿ ಹಾಗೂ ಗೋಕಾಕ, ರಾಯಬಾಗ, ಮುಧೋಳ, ಜಮಖಂಡಿ ಮತ್ತು ಅಥಣಿ ಭಾಗದ ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೌಜಲಗಿ:</strong> ‘ರೈತರ ಕಬ್ಬಿನ ಬಾಕಿ ₹ 21 ಕೋಟಿ ಪಾವತಿಸಲು ಬಾಗಲಕೋಟೆ ಜಿಲ್ಲಾಧಿಕಾರಿ ಮಧ್ಯಸ್ಥಿಕೆ ವಹಿಸಬೇಕು’ ಎಂದು ರೈತ ಮುಖಂಡ ಅರವಿಂದ ದಳವಾಯಿ ಒತ್ತಾಯಿಸಿದರು.</p>.<p>ಇಲ್ಲಿನ ದಳವಾಯಿ ತೋಟದಲ್ಲಿ ನಡೆದ ಸಾವರಿನ್ ಶುಗರ್ಸ್ಗೆ ಕಬ್ಬು ಪೂರೈಸಿದ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸಾವರಿನ್ ಕಾರ್ಖಾನೆಯ ಚರಾಸ್ತಿ-ಸ್ಥಿರಾಸ್ತಿಗಳನ್ನು ಬ್ಯಾಂಕಿನವರು ವಶಪಡಿಸಿದ್ದಾರೆ. ರೈತರ ಕಬ್ಬಿನ ಬಾಕಿ ಹಣ ಪಾವತಿಸಿದ ಮೇಲೆ ಕಾರ್ಖಾನೆ ಆಸ್ತಿ ಹರಾಜು ಮಾಡಲು ಬಾಗಲಕೋಟೆ ಜಿಲ್ಲಾಧಿಕಾರಿ ಆದೇಶಿಸಿದರೂ ಬ್ಯಾಂಕ್ನವರು ಇದುವರೆಗೂ ರೈತರಿಗೆ ಬಾಕಿ ಹಣ ಪಾವತಿಸಿಲ್ಲ. ಇದನ್ನು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.</p>.<p>ರೈತರಿಗೆ ನ್ಯಾಯ ದೊರೆಯಲು ವಿಳಂಬವಾದರೆ ಬೆಂಗಳೂರಿನ ಸಕ್ಕರೆ ಆಯುಕ್ತರ ಕಚೇರಿ ಮುಂದೆ ಸೆ.21ರಂದು ಧರಣಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ರೈತ ಮುಖಂಡರಾದ ಗಂಗಾಧರ ಮೇಟಿ, ಶ್ರೀಶೈಲ ಅಂಗಡಿ ಮಾತನಾಡಿದರು. ರೈತರಾದ ರಮಜಾನ್ ಹಕ್ಕಿ, ಸಿದ್ದಪ್ಪ ಸಣ್ಣಕ್ಕಿ, ಶಿವಪ್ಪ ಬಳೋಲದಾರ, ರಾಮಣ್ಣ ಗೂರನವರ ನೀಲಪ್ಪ ಯಲಿಗಾರ, ಈರಪ್ಪ ಸಸಾಲಟ್ಟಿ ಹಾಗೂ ಗೋಕಾಕ, ರಾಯಬಾಗ, ಮುಧೋಳ, ಜಮಖಂಡಿ ಮತ್ತು ಅಥಣಿ ಭಾಗದ ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>