‘ಉಪ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ನಾಯಕರು ಕೋವಿಡ್ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಪ್ರಚಾರ ಸಭೆಗಳನ್ನು ನಡೆಸಿದರು. ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಸಿಲುಕಿ ಕಠಿಣ ಕ್ರಮ ವಹಿಸಲಿಲ್ಲ. ಗಣ್ಯರ ವಿರುದ್ಧ ಎಫ್ಐಆರ್ ದಾಖಲಿಸದೆ, ಅಲ್ಲಲ್ಲಿ ಅಲ್ಪ ಸ್ವಲ್ಪ ದಂಡ ವಿಧಿಸಿ ಕೈತೊಳೆದುಕೊಂಡರು. ಉಪ ಚುನಾವಣೆ ಘೋಷಣೆಗೆ ಮುನ್ನ ಇದ್ದ ಪ್ರಕರಣಗಳು ಹಾಗೂ ಬಳಿಕ ಏರಿಕೆಯಾದ ಕೋವಿಡ್ ಪ್ರಕರಣಗಳನ್ನು ಗಮನಿಸಿದರೆ, ಪ್ರಚಾರ ಸಮಾವೇಶಗಳೇ ಕಾರಣ ಆಗಿರುವುದನ್ನು ಗಮನಿಸಬಹುದು’ ಎಂದಿದ್ದಾರೆ.