<p><strong>ಬೆಳಗಾವಿ:</strong> ‘ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಅನುದಾನದ ಕೊರತೆಯಿಂದಾಗಿ ಹಲವು ವರ್ಷಗಳಿಂದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೇಮಕ ಮಾಡಲಾಗಿಲ್ಲ. ಇರುವ ಸಿಬ್ಬಂದಿಗೆ ವೇತನದ ಸಮಸ್ಯೆ ಎದುರಾಗಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪ್ರತಿಭಟಿಸಿದರೂ ಪ್ರಯೋಜನವಾಗಿಲ್ಲ. ರಾಜ್ಯದ ಹೆಮ್ಮೆಯ ವಿಶ್ವವಿದ್ಯಾಲಯಕ್ಕೆ ಈ ದುಃಸ್ಥಿತಿ ಬರುವಂತೆ ಸರ್ಕಾರ ನಡೆದುಕೊಂಡಿರುವುದು ಖಂಡನೀಯ’ ಎಂದರು.</p>.<p>‘ಕನ್ನಡದ ಬೆಳವಣಿಗೆ, ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಸ್ಥಾಪಿಸಿದ ವಿಶ್ವವಿದ್ಯಾಲಯದ ಮೂಲ ಅಶಯವನ್ನು ರಾಜಕೀಯ ಕಾರಣಗಳಿಗಾಗಿ ಬಲಿ ಕೊಡಬಾರದು. ಕನ್ನಡದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವುದು ನೋವಿನ ಸಂಗತಿಯಾಗಿದೆ’ ಎಂದು ತಿಳಿಸಿದರು.</p>.<p>‘ಹಿಂದೆ ಆ ವಿ.ವಿ. ನಿರ್ವಹಣೆಗೆ ವಾರ್ಷಿಕ ₹ 5 ಕೋಟಿ ಕೊಡಲಾಗುತ್ತಿತ್ತು. ಈಗ ಪ್ರಕೃತಿ ವಿಕೋಪ ಹಾಗೂ ಕೊರೊನಾ ನೆಪವೊಡ್ಡಿ ₹ 50 ಲಕ್ಷಕ್ಕೆ ಸೀಮಿತಗೊಳಿಸಿ, ಅದರಲ್ಲಿ ₹ 12 ಲಕ್ಷವನ್ನಷ್ಟೆ ಬಿಡುಗಡೆ ಮಾಡಲಾಗಿದೆ. ಇದು ಸರಿಯಲ್ಲ. ಅಗತ್ಯ ಅನುದಾನ ಒದಗಿಸಿ ಕನ್ನಡದ ಕೆಲಸಕ್ಕೆ ಪ್ರೋತ್ಸಾಹ ಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಸಂಗೋಡಿ, ಮಂಜುನಾಥ ಪಾಟೀಲ, ಬಸು ದೊಡ್ಡಮನಿ, ನಾಗರಾಜ ದೊಡ್ಡಮನಿ, ಪ್ರವೀಣ ಬಡಿಗೇರ, ಮಂಜು ಹಡಪದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಅನುದಾನದ ಕೊರತೆಯಿಂದಾಗಿ ಹಲವು ವರ್ಷಗಳಿಂದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೇಮಕ ಮಾಡಲಾಗಿಲ್ಲ. ಇರುವ ಸಿಬ್ಬಂದಿಗೆ ವೇತನದ ಸಮಸ್ಯೆ ಎದುರಾಗಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪ್ರತಿಭಟಿಸಿದರೂ ಪ್ರಯೋಜನವಾಗಿಲ್ಲ. ರಾಜ್ಯದ ಹೆಮ್ಮೆಯ ವಿಶ್ವವಿದ್ಯಾಲಯಕ್ಕೆ ಈ ದುಃಸ್ಥಿತಿ ಬರುವಂತೆ ಸರ್ಕಾರ ನಡೆದುಕೊಂಡಿರುವುದು ಖಂಡನೀಯ’ ಎಂದರು.</p>.<p>‘ಕನ್ನಡದ ಬೆಳವಣಿಗೆ, ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಸ್ಥಾಪಿಸಿದ ವಿಶ್ವವಿದ್ಯಾಲಯದ ಮೂಲ ಅಶಯವನ್ನು ರಾಜಕೀಯ ಕಾರಣಗಳಿಗಾಗಿ ಬಲಿ ಕೊಡಬಾರದು. ಕನ್ನಡದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವುದು ನೋವಿನ ಸಂಗತಿಯಾಗಿದೆ’ ಎಂದು ತಿಳಿಸಿದರು.</p>.<p>‘ಹಿಂದೆ ಆ ವಿ.ವಿ. ನಿರ್ವಹಣೆಗೆ ವಾರ್ಷಿಕ ₹ 5 ಕೋಟಿ ಕೊಡಲಾಗುತ್ತಿತ್ತು. ಈಗ ಪ್ರಕೃತಿ ವಿಕೋಪ ಹಾಗೂ ಕೊರೊನಾ ನೆಪವೊಡ್ಡಿ ₹ 50 ಲಕ್ಷಕ್ಕೆ ಸೀಮಿತಗೊಳಿಸಿ, ಅದರಲ್ಲಿ ₹ 12 ಲಕ್ಷವನ್ನಷ್ಟೆ ಬಿಡುಗಡೆ ಮಾಡಲಾಗಿದೆ. ಇದು ಸರಿಯಲ್ಲ. ಅಗತ್ಯ ಅನುದಾನ ಒದಗಿಸಿ ಕನ್ನಡದ ಕೆಲಸಕ್ಕೆ ಪ್ರೋತ್ಸಾಹ ಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಸಂಗೋಡಿ, ಮಂಜುನಾಥ ಪಾಟೀಲ, ಬಸು ದೊಡ್ಡಮನಿ, ನಾಗರಾಜ ದೊಡ್ಡಮನಿ, ಪ್ರವೀಣ ಬಡಿಗೇರ, ಮಂಜು ಹಡಪದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>