<p><strong>ಚನ್ನಮ್ಮನ ಕಿತ್ತೂರು:</strong> ತಾಲ್ಲೂಕಿನ ಕತ್ರಿದಡ್ಡಿ ಸರ್ಕಾರಿ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆ ಬಿಡುವ ವೇಳೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.</p>.<p>ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಕುರಬರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮಹಾಂತೇಶ ಎಮ್ಮಿ ಗುರುವಾರ ಪತ್ರಕರ್ತರ ಜತೆ ಮಾತನಾಡಿ ‘ಕುಲವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂಬತ್ತು ಗ್ರಾಮಗಳು ಬರುತ್ತವೆ. ಈ ಎಲ್ಲ ಹಳ್ಳಿಗಳ ಮಕ್ಕಳು ಕತ್ರಿದಡ್ಡಿ ಪ್ರೌಢಶಾಲೆಗೆ ಓದಲು ಬರುತ್ತಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 300 ತಲುಪಿದೆ. ಬೆಳಿಗ್ಗೆ ವೇಳೆ ಎರಡು ಬಸ್ ವ್ಯವಸ್ಥೆಯಿದೆ. ಶಾಲೆ ಬಿಟ್ಟ ನಂತರ ಒಂದೇ ಬಸ್ ಸಂಚರಿಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ’ ಎಂದು ಹೇಳಿದರು.</p>.<p>‘ಸಾರಿಗೆ ಅಧಿಕಾರಿಗಳು ವಿದ್ಯಾರ್ಥಿನಿಯರ ಪ್ರಯಾಣದ ಈ ಸಮಸ್ಯೆಗೆ ಸ್ಪಂದಿಸಬೇಕು. ಹೆಚ್ಚುವರಿ ಮತ್ತೊಂದು ಬಸ್ ಸಂಜೆ ವೇಳೆ ಓಡಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ತಾಲ್ಲೂಕಿನ ಕತ್ರಿದಡ್ಡಿ ಸರ್ಕಾರಿ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆ ಬಿಡುವ ವೇಳೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.</p>.<p>ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಕುರಬರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮಹಾಂತೇಶ ಎಮ್ಮಿ ಗುರುವಾರ ಪತ್ರಕರ್ತರ ಜತೆ ಮಾತನಾಡಿ ‘ಕುಲವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂಬತ್ತು ಗ್ರಾಮಗಳು ಬರುತ್ತವೆ. ಈ ಎಲ್ಲ ಹಳ್ಳಿಗಳ ಮಕ್ಕಳು ಕತ್ರಿದಡ್ಡಿ ಪ್ರೌಢಶಾಲೆಗೆ ಓದಲು ಬರುತ್ತಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 300 ತಲುಪಿದೆ. ಬೆಳಿಗ್ಗೆ ವೇಳೆ ಎರಡು ಬಸ್ ವ್ಯವಸ್ಥೆಯಿದೆ. ಶಾಲೆ ಬಿಟ್ಟ ನಂತರ ಒಂದೇ ಬಸ್ ಸಂಚರಿಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ’ ಎಂದು ಹೇಳಿದರು.</p>.<p>‘ಸಾರಿಗೆ ಅಧಿಕಾರಿಗಳು ವಿದ್ಯಾರ್ಥಿನಿಯರ ಪ್ರಯಾಣದ ಈ ಸಮಸ್ಯೆಗೆ ಸ್ಪಂದಿಸಬೇಕು. ಹೆಚ್ಚುವರಿ ಮತ್ತೊಂದು ಬಸ್ ಸಂಜೆ ವೇಳೆ ಓಡಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>