ಬೆಳಗಾವಿ: ‘ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನಾದವರು ಬೆಳಗಾವಿಯಲ್ಲಿ ಹಿಂದಿನಿಂದಲೂ ಗೂಂಡಾಗಿರಿ ಮತ್ತು ದಾದಾಗಿರಿ ನಡೆಸಿದ್ದಾರೆ. ಗಡಿಯಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ, ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಈ ಕುರಿತು ನಮ್ಮ ಸರ್ಕಾರದಿಂದಲೂ ಪುಸ್ತಕ ಹೊರತರಬೇಕು’ ಎಂದು ಕನ್ನಡ ಹೋರಾಟಗಾರ ಮೆಹಬೂಬ ಮಕಾನದಾರ ಒತ್ತಾಯಿಸಿದರು.