<p><strong>ರಾಯಬಾಗ:</strong> ಕೃಷಿ ಇಲಾಖೆಯಿಂದ ನಡೆಸಿದ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾದ ತಮಗೆ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪಿ.ಆರ್. (ಖಾಸಗಿ ನಿವಾಸಿಗಳು)ಗಳು ಇಲ್ಲಿನ ಉಪ ತಹಶೀಲ್ದಾರ್ ಪರಮಾನಂದ ಮಂಗಸೂಳಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>‘ತಾಲ್ಲೂಕಿನ ಬೇರೆ ಬೇರೆ ಹಳ್ಳಿಗಳವರಾದ ನಾವು ಸಮೀಕ್ಷೆಯಲ್ಲಿ ಪಾಲ್ಗೊಂಡು, ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದೇವೆ. ಇದಾಗಿ ಮೂರ್ನಾಲ್ಕು ತಿಂಗಳುಗಳು ಕಳೆದಿವೆ. ಆದರೆ ಇದುವರೆಗೂ ನಮಗೆ ನೀಡಬೇಕಾದ ಸಂಬಳವನ್ನು ಕೊಟ್ಟಿಲ್ಲ. ನಮ್ಮ ಒತ್ತಾಯದ ಮೇರೆಗೆ ₹ 100, ₹ 200, ₹ 500 ಹಾಗೂ ₹ 1 ಸಾವಿರವನ್ನು ಜಮಾ ಮಾಡಿದ್ದಾರೆ. ಬಹುತೇಕರಿಗೆ ಸಂಪೂರ್ಣವಾಗಿ ವೇತನ ಸಿಕ್ಕಿಲ್ಲ. ಅಲೆದಾಡಿದರೂ 30ರಿಂದ 40 ಪಿ.ಆರ್.ಗಳಿಗೆ ಹಣ ಬಂದಿಲ್ಲ. ಸಂಬಂಧಿಸಿದ ಅಧಿಕಾರಿಗಳನ್ನು ಖುದ್ದಾಗಿ ವಿಚಾರಿಸಿದಾಗ, ಹಾರಿಕೆಯ ಉತ್ತರಗಳನ್ನು ನೀಡಿದ್ದಾರೆ. ಕೋವಿಡ್–19 ಭೀತಿಯಲ್ಲೂ ಕೆಲಸ ಮಾಡಿದ ನಮಗೆ ನೆರವಾಗದಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೂಡಲೇ ನ್ಯಾಯ ದೊರಕಿಸಿಕೊಡಬೇಕು’ ಎಂದು ಕೋರಿದರು.</p>.<p>ದರ್ಶನ ಕಾಂಬ್ಳೆ, ನಿಂಗಪ್ಪ ಕರಿಹೊಳೆ, ಮಿಥುನ ಕಾಂಬಳೆ, ನಾಗಪ್ಪ ಧುಮಾಳೆ, ಮಹಾವೀರ ಹಂಜಿ, ಮಾಯಪ್ಪ ಜಗದಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಬಾಗ:</strong> ಕೃಷಿ ಇಲಾಖೆಯಿಂದ ನಡೆಸಿದ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾದ ತಮಗೆ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪಿ.ಆರ್. (ಖಾಸಗಿ ನಿವಾಸಿಗಳು)ಗಳು ಇಲ್ಲಿನ ಉಪ ತಹಶೀಲ್ದಾರ್ ಪರಮಾನಂದ ಮಂಗಸೂಳಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>‘ತಾಲ್ಲೂಕಿನ ಬೇರೆ ಬೇರೆ ಹಳ್ಳಿಗಳವರಾದ ನಾವು ಸಮೀಕ್ಷೆಯಲ್ಲಿ ಪಾಲ್ಗೊಂಡು, ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದೇವೆ. ಇದಾಗಿ ಮೂರ್ನಾಲ್ಕು ತಿಂಗಳುಗಳು ಕಳೆದಿವೆ. ಆದರೆ ಇದುವರೆಗೂ ನಮಗೆ ನೀಡಬೇಕಾದ ಸಂಬಳವನ್ನು ಕೊಟ್ಟಿಲ್ಲ. ನಮ್ಮ ಒತ್ತಾಯದ ಮೇರೆಗೆ ₹ 100, ₹ 200, ₹ 500 ಹಾಗೂ ₹ 1 ಸಾವಿರವನ್ನು ಜಮಾ ಮಾಡಿದ್ದಾರೆ. ಬಹುತೇಕರಿಗೆ ಸಂಪೂರ್ಣವಾಗಿ ವೇತನ ಸಿಕ್ಕಿಲ್ಲ. ಅಲೆದಾಡಿದರೂ 30ರಿಂದ 40 ಪಿ.ಆರ್.ಗಳಿಗೆ ಹಣ ಬಂದಿಲ್ಲ. ಸಂಬಂಧಿಸಿದ ಅಧಿಕಾರಿಗಳನ್ನು ಖುದ್ದಾಗಿ ವಿಚಾರಿಸಿದಾಗ, ಹಾರಿಕೆಯ ಉತ್ತರಗಳನ್ನು ನೀಡಿದ್ದಾರೆ. ಕೋವಿಡ್–19 ಭೀತಿಯಲ್ಲೂ ಕೆಲಸ ಮಾಡಿದ ನಮಗೆ ನೆರವಾಗದಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೂಡಲೇ ನ್ಯಾಯ ದೊರಕಿಸಿಕೊಡಬೇಕು’ ಎಂದು ಕೋರಿದರು.</p>.<p>ದರ್ಶನ ಕಾಂಬ್ಳೆ, ನಿಂಗಪ್ಪ ಕರಿಹೊಳೆ, ಮಿಥುನ ಕಾಂಬಳೆ, ನಾಗಪ್ಪ ಧುಮಾಳೆ, ಮಹಾವೀರ ಹಂಜಿ, ಮಾಯಪ್ಪ ಜಗದಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>