‘ಸುವರ್ಣ ವಿಧಾನಸೌಧ ನಿರ್ಮಾಣವಾದ ನಂತರ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ ಎಂದು ಭಾವಿಸಿದ್ದೆವು. ನಾವು 2ನೇ ದರ್ಜೆ ಜನರಲ್ಲ ಎಂದು ತಿಳಿದಿದ್ದೆವು. ಆದರೆ, ನಿರೀಕ್ಷೆ ಹುಸಿಯಾಗಿದೆ. ಎಂಟು ವರ್ಷಗಳಿಂದಲೂ ಈ ಸೌಧವನ್ನು ಖಾಲಿ ಬಿಡಲಾಗಿದೆ. ರಾಜ್ಯಮಟ್ಟದ ಕಚೇರಿಗಳ ಬದಲಿಗೆ ಧಾರವಾಡ, ಹುಬ್ಬಳ್ಳಿಯಲ್ಲಿರುವ ಸಣ್ಣಪುಟ್ಟ ಕಚೇರಿಗಳನ್ನು ಸ್ಥಳಾಂತರಿಸುವುದಕ್ಕೆ ನಮ್ಮ ವಿರೋಧವಿದೆ. ಈ ನಿಟ್ಟಿನಲ್ಲಿ ನ್ಯಾಯಕ್ಕಾಗಿ ಹೋರಾಟ ಮುಂದುವರಿಸಲಾಗುವುದು’ ಎಂದರು.