ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಸಾಲ ಮನ್ನಾಕ್ಕೆ ಆಗ್ರಹ

Last Updated 13 ಫೆಬ್ರುವರಿ 2020, 14:08 IST
ಅಕ್ಷರ ಗಾತ್ರ

ಬೆಳಗಾವಿ: ‘ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿರುವುದರಿಂದಾಗಿ, ವಿದ್ಯಾರ್ಥಿಗಳು ಪಡೆದಿರುವ ಶಿಕ್ಷಣ ಸಾಲ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ಶಿಕ್ಷಣ ಸಾಲ ಪಡೆದು ವಿವಿಧ ಕೋರ್ಸ್‌ಗಳನ್ನು ಮುಗಿಸಿರುವ ಯುವಜನರು ಉದ್ಯೋಗ ಸಿಗದೇ ಪರದಾಡುತ್ತಿದ್ದಾರೆ. ನಗರಗಳಲ್ಲಿ ಕೆಲಸಗಳಿಗಾಗಿ ಅಲೆದಾಡುತ್ತಿದ್ದಾರೆ. ಕೆಲವರು ಸಾಲ ತೀರಿಸಲು ಸಾಧ್ಯವಾಗದೇ ಬದುಕಿಗೆ ಶರಣು ಹೇಳುತ್ತಿರುವುದು ದುರಂತಗಳೂ ನಡೆಯುತ್ತಿವೆ. ಹೀಗಾಗಿ, ಅವರಿಗೆ ಸರ್ಕಾರ ಸ್ಪಂದಿಸಬೇಕು. ಶಿಕ್ಷಣ ಸಾಲ ಮನ್ನಾ ಮಾಡುವುದರೊಂದಿಗೆ, ನಿರುದ್ಯೋಗ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.

ಅಧ್ಯಕ್ಷ ಅಪ್ಪಾಸಾಬ ದೇಸಾಯಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT