‘ಆಗಸ್ಟ್ನಲ್ಲಿ ಉಂಟಾದ ಪ್ರವಾಹದಿಂದ ಮನೆ, ಬೆಳೆ, ದವಸ ಧಾನ್ಯಗಳು, ಜಾನುವಾರುಗಳು ಹೀಗೆ... ತಮ್ಮ ಬದುಕನ್ನೇ ಕಳೆದುಕೊಂಡಿರುವ ಲಕ್ಷಾಂತರ ಕುಟುಂಬಗಳಿಗೆ ಸರ್ಕಾರದಿಂದ ಇನ್ನೂ ಪರಿಹಾರವೇ ಸಿಕ್ಕಿಲ್ಲ. ಇಂದಿಗೂ ಅನೇಕ ಕುಟುಂಬಗಳು ತಾತ್ಕಾಲಿಕ ಶೆಡ್ಗಳಲ್ಲಿ ಬದುಕುತ್ತಿವೆ. ರೈತರು ಸಾಲ ಮರುಪಾವತಿಸುವ ಶಕ್ತಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಗ್ರಾಮೀಣ ಬದುಕಿನಲ್ಲಿ ಕತ್ತಲೆ ಆವರಿಸಿದೆ. ಇಂತಹ ಭೀಕರ ಸಮಯದಲ್ಲಿ ಸರ್ಕಾರದ ಈ ಆದೇಶ ಸಹನೀಯವಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.