<p><strong>ಬೆಳಗಾವಿ: </strong>‘ಕೊರೊನಾ ಹಾಗೂ ಲಾಕ್ಡೌನ್ದಿಂದಾಗಿ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆ ಇಲ್ಲದೇ, ಸಂಬಳ ಇಲ್ಲದೇ ಕಂಗಾಲಾಗಿರುವ ಇಂತಹ ಸಂದರ್ಭದಲ್ಲಿ ಆಸ್ತಿ ತೆರಿಗೆಯನ್ನು ಶೇ 25ರಷ್ಟು ಹೆಚ್ಚಿಸಿರುವುದು ಸರಿಯಲ್ಲ. ತಕ್ಷಣ ಈ ಆದೇಶವನ್ನು ವಾಪಸ್ ಪಡೆಯಬೇಕು’ ಎಂದು ಮಾಜಿ ನಗರ ಸೇವಕ ಅಸೋಸಿಯೇಷನ್ ಒತ್ತಾಯಿಸಿದೆ.</p>.<p>ಇಲ್ಲಿನ ಜಿಲ್ಲಾಧಿಕಾರಿಯವರಿಗೆ ಸೋಮವಾರ ಮನವಿ ಸಲ್ಲಿಸಿದ ಅವರು, ‘ಜನರ ಕಷ್ಟವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ತೆರಿಗೆ ಏರಿಕೆಯನ್ನು ತಡೆಯಬೇಕು’ ಎಂದು ಮನವಿ ಮಾಡಿದರು.</p>.<p>‘2 ತಿಂಗಳ ಲಾಕ್ಡೌನ್ ಅವಧಿಯಲ್ಲಿ ಬಹಳಷ್ಟು ಜನರು ಕೆಲಸ ಕಳೆದುಕೊಂಡಿದ್ದಾರೆ. ಬಹಳಷ್ಟು ಜನರ ಬಳಿ ಹಣವಿಲ್ಲ. ಅದಕ್ಕಾಗಿ ಮಕ್ಕಳ ಶಾಲಾ ಶುಲ್ಕವನ್ನು ಕಟ್ಟುನಿಟ್ಟಾಗಿ ತುಂಬುವಂತೆ ಪಾಲಕರಿಗೆ ಒತ್ತಾಯಿಸದಂತೆ ಶಾಲೆಗಳಿಗೆ ಸರ್ಕಾರ ಸೂಚನೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಲಾಕ್ಡೌನ್ ಅವಧಿಯಲ್ಲಿ ಪತ್ರಿಕಾಲಯಗಳಿಗೂ ಸಾಕಷ್ಟು ನಷ್ಟ ಉಂಟಾಗಿದೆ. ಎಷ್ಟೋ ಕಡೆ ಸಿಬ್ಬಂದಿಗಳಿಗೂ ವೇತನ ಪಾವತಿಸಲಾಗಿಲ್ಲ. ಕೇಂದ್ರ ಸರ್ಕಾರ ಶ್ರಮಿಕ ವರ್ಗದವರಿಗೆ ನೀಡುತ್ತಿರುವ ಪ್ಯಾಕೇಜ್ ಅಡಿ ಈ ಸಿಬ್ಬಂದಿಗಳಿಗೂ ಪರಿಹಾರ ನೀಡಬೇಕು’ ಎಂದು ಕೋರಿದರು.</p>.<p>ಅಧ್ಯಕ್ಷ ನಾಗೇಶ ಸಾತೇರಿ, ಉಪಾಧ್ಯಕ್ಷ ಗೋವಿಂದ ರಾವೂತ್, ನಿಂಗಪ್ಪ ನಿರ್ವಾಣಿ, ಶಿವಾಜಿ ಸುಂಠಕರ, ಧನರಾಜ್ ಗವಳಿ, ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕೊರೊನಾ ಹಾಗೂ ಲಾಕ್ಡೌನ್ದಿಂದಾಗಿ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆ ಇಲ್ಲದೇ, ಸಂಬಳ ಇಲ್ಲದೇ ಕಂಗಾಲಾಗಿರುವ ಇಂತಹ ಸಂದರ್ಭದಲ್ಲಿ ಆಸ್ತಿ ತೆರಿಗೆಯನ್ನು ಶೇ 25ರಷ್ಟು ಹೆಚ್ಚಿಸಿರುವುದು ಸರಿಯಲ್ಲ. ತಕ್ಷಣ ಈ ಆದೇಶವನ್ನು ವಾಪಸ್ ಪಡೆಯಬೇಕು’ ಎಂದು ಮಾಜಿ ನಗರ ಸೇವಕ ಅಸೋಸಿಯೇಷನ್ ಒತ್ತಾಯಿಸಿದೆ.</p>.<p>ಇಲ್ಲಿನ ಜಿಲ್ಲಾಧಿಕಾರಿಯವರಿಗೆ ಸೋಮವಾರ ಮನವಿ ಸಲ್ಲಿಸಿದ ಅವರು, ‘ಜನರ ಕಷ್ಟವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ತೆರಿಗೆ ಏರಿಕೆಯನ್ನು ತಡೆಯಬೇಕು’ ಎಂದು ಮನವಿ ಮಾಡಿದರು.</p>.<p>‘2 ತಿಂಗಳ ಲಾಕ್ಡೌನ್ ಅವಧಿಯಲ್ಲಿ ಬಹಳಷ್ಟು ಜನರು ಕೆಲಸ ಕಳೆದುಕೊಂಡಿದ್ದಾರೆ. ಬಹಳಷ್ಟು ಜನರ ಬಳಿ ಹಣವಿಲ್ಲ. ಅದಕ್ಕಾಗಿ ಮಕ್ಕಳ ಶಾಲಾ ಶುಲ್ಕವನ್ನು ಕಟ್ಟುನಿಟ್ಟಾಗಿ ತುಂಬುವಂತೆ ಪಾಲಕರಿಗೆ ಒತ್ತಾಯಿಸದಂತೆ ಶಾಲೆಗಳಿಗೆ ಸರ್ಕಾರ ಸೂಚನೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಲಾಕ್ಡೌನ್ ಅವಧಿಯಲ್ಲಿ ಪತ್ರಿಕಾಲಯಗಳಿಗೂ ಸಾಕಷ್ಟು ನಷ್ಟ ಉಂಟಾಗಿದೆ. ಎಷ್ಟೋ ಕಡೆ ಸಿಬ್ಬಂದಿಗಳಿಗೂ ವೇತನ ಪಾವತಿಸಲಾಗಿಲ್ಲ. ಕೇಂದ್ರ ಸರ್ಕಾರ ಶ್ರಮಿಕ ವರ್ಗದವರಿಗೆ ನೀಡುತ್ತಿರುವ ಪ್ಯಾಕೇಜ್ ಅಡಿ ಈ ಸಿಬ್ಬಂದಿಗಳಿಗೂ ಪರಿಹಾರ ನೀಡಬೇಕು’ ಎಂದು ಕೋರಿದರು.</p>.<p>ಅಧ್ಯಕ್ಷ ನಾಗೇಶ ಸಾತೇರಿ, ಉಪಾಧ್ಯಕ್ಷ ಗೋವಿಂದ ರಾವೂತ್, ನಿಂಗಪ್ಪ ನಿರ್ವಾಣಿ, ಶಿವಾಜಿ ಸುಂಠಕರ, ಧನರಾಜ್ ಗವಳಿ, ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>