ಡಿಎಚ್ಒ ಡಾ.ಶಶಿಕಾಂತ ಮುನ್ಯಾಳ ಮಾತನಾಡಿ, ‘ಮನೆ ಸುತ್ತಮುತ್ತಲಿನ ಪ್ರದೇಶದ ಘನತ್ಯಾಜ್ಯದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಬ್ಯಾರಲ್, ಸಿಮೆಂಟ್ ಟ್ಯಾಂಕ್ ಇನ್ನಿತರ ಕಡೆಗಳಲ್ಲಿನ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುವುದನ್ನು ತಡೆಗಟ್ಟುವುದರಿಂದ ಡೆಂಗಿ ಹರಡದಂತೆ ನಿಯಂತ್ರಿಸಬಹುದು’ ಎಂದರು.