<p><strong>ಬೆಳಗಾವಿ</strong>: ‘ಡೆಂಗಿ, ಚಿಕೂನ್ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಬಾಧಿಸದಂತೆ ಜನಸಾಮಾನ್ಯರು ಮುಂಜಾಗ್ರತೆ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಜನರಿಗೆ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.</p>.<p>ರಾಷ್ಟ್ರೀಯ ಡೆಂಗಿ ದಿನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡೆಂಗಿ ಜಾಗೃತಿ ಜಾಥಾಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ದೂರವಿರಬಹುದು’ ಎಂದರು.</p>.<p>ಡಿಎಚ್ಒ ಡಾ.ಶಶಿಕಾಂತ ಮುನ್ಯಾಳ ಮಾತನಾಡಿ, ‘ಮನೆ ಸುತ್ತಮುತ್ತಲಿನ ಪ್ರದೇಶದ ಘನತ್ಯಾಜ್ಯದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಬ್ಯಾರಲ್, ಸಿಮೆಂಟ್ ಟ್ಯಾಂಕ್ ಇನ್ನಿತರ ಕಡೆಗಳಲ್ಲಿನ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುವುದನ್ನು ತಡೆಗಟ್ಟುವುದರಿಂದ ಡೆಂಗಿ ಹರಡದಂತೆ ನಿಯಂತ್ರಿಸಬಹುದು’ ಎಂದರು.</p>.<p>‘ಡೆಂಗಿ ನಿಯಂತ್ರಣದಲ್ಲಿ ಸಮುದಾಯದ ಭಾಗವಹಿಸುವಿಕೆ ಪ್ರಮುಖವಾಗಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಹಕಾರವೂ ಅಗತ್ಯವಾಗಿದೆ. ಯಾವುದೇ ಜ್ವರ ಕಂಡುಬಂದರೆ ನಿರ್ಲಕ್ಷ್ಯ ವಹಿಸದೆ ತಕ್ಷಣವೆ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಎಸ್. ಪಲ್ಲೇದ, ‘ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಶುರುವಾದ ಜಾಗೃತಿ ಜಾಥಾ ಚನ್ನಮ್ಮ ವೃತ್ತದ ಮಾರ್ಗವಾಗಿ ಬೋಗಾರವೇಸ್ನಲ್ಲಿ ಕೊನೆಗೊಂಡಿತು.</p>.<p>ಜಿ.ಪಂ. ಸಿಇಒ ಎಚ್.ವಿ. ದರ್ಶನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಡೆಂಗಿ, ಚಿಕೂನ್ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಬಾಧಿಸದಂತೆ ಜನಸಾಮಾನ್ಯರು ಮುಂಜಾಗ್ರತೆ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಜನರಿಗೆ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.</p>.<p>ರಾಷ್ಟ್ರೀಯ ಡೆಂಗಿ ದಿನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡೆಂಗಿ ಜಾಗೃತಿ ಜಾಥಾಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ದೂರವಿರಬಹುದು’ ಎಂದರು.</p>.<p>ಡಿಎಚ್ಒ ಡಾ.ಶಶಿಕಾಂತ ಮುನ್ಯಾಳ ಮಾತನಾಡಿ, ‘ಮನೆ ಸುತ್ತಮುತ್ತಲಿನ ಪ್ರದೇಶದ ಘನತ್ಯಾಜ್ಯದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಬ್ಯಾರಲ್, ಸಿಮೆಂಟ್ ಟ್ಯಾಂಕ್ ಇನ್ನಿತರ ಕಡೆಗಳಲ್ಲಿನ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುವುದನ್ನು ತಡೆಗಟ್ಟುವುದರಿಂದ ಡೆಂಗಿ ಹರಡದಂತೆ ನಿಯಂತ್ರಿಸಬಹುದು’ ಎಂದರು.</p>.<p>‘ಡೆಂಗಿ ನಿಯಂತ್ರಣದಲ್ಲಿ ಸಮುದಾಯದ ಭಾಗವಹಿಸುವಿಕೆ ಪ್ರಮುಖವಾಗಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಹಕಾರವೂ ಅಗತ್ಯವಾಗಿದೆ. ಯಾವುದೇ ಜ್ವರ ಕಂಡುಬಂದರೆ ನಿರ್ಲಕ್ಷ್ಯ ವಹಿಸದೆ ತಕ್ಷಣವೆ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಎಸ್. ಪಲ್ಲೇದ, ‘ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಶುರುವಾದ ಜಾಗೃತಿ ಜಾಥಾ ಚನ್ನಮ್ಮ ವೃತ್ತದ ಮಾರ್ಗವಾಗಿ ಬೋಗಾರವೇಸ್ನಲ್ಲಿ ಕೊನೆಗೊಂಡಿತು.</p>.<p>ಜಿ.ಪಂ. ಸಿಇಒ ಎಚ್.ವಿ. ದರ್ಶನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>