ಮಳೆಗಾಲದಲ್ಲಿ ಡೆಂಗಿ ಸೊಳ್ಳೆ ಹುಟ್ಟುವುದು ಸಾಮಾನ್ಯ. ಇದರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಎಲ್ಲ ಕ್ರಮ ಕೈಗೊಂಡಿದೆ. ಮನೆಮನೆ ಸಮೀಕ್ಷೆ ಆರಂಭಿಸಲಾಗಿದೆ. ಎಲ್ಲೆಂದರಲ್ಲಿ ನೀರು ನಿಲ್ಲದಂತೆ ಅರಿವು ಮೂಡಿಲಾಗುತ್ತಿದೆ. ಇದೂವರೆಗೆ ಯಾವುದೇ ಸಾವು ಸಂಭವಿಸಿಲ್ಲ. ಇಲಾಖೆಯ ಸಿಬ್ಬಂದಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ. ಜನ ಭಯಪಡಬೇಕಿಲ್ಲ. –
ಡಾ.ಮಹೇಶ ಕೋಣಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಡೆಂಗಿ ಚಿಕೂನ್ ಗುನ್ಯ ವೈರಾಣು ಹರಡುವಿಕೆಯನ್ನು ತುರ್ತಾಗಿ ತಡೆಗಟ್ಟಬೇಕು. ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಫಾಗಿಂಗ್ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕು. ನಿಂತ ನೀರನ್ನು ಹರಿದು ಹೋಗುವಂತೆ ನೋಡಿಕೊಳ್ಳಬೇಕು. ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ನಾಗರಿಕರಲ್ಲಿ ಅರಿವು ಮೂಡಿಸಬೇಕು.
ಸೋಮನಾಥ ಸೊಪ್ಪಿಮಠ
ಬೈಲಹೊಂಗಲ ಪಟ್ಟಣ ಹಾಗೂ ತಾಲ್ಲೂಕಿನಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿವೆ. ಆರೋಗ್ಯ ಇಲಾಖೆ ಪೂರ್ವ ತಯಾರಿ ಮಾಡಿಕೊಳ್ಳದಿರುವುದೇ ಇದಕ್ಕೆ ಕಾರಣ. ಕಳೆದ ಹತ್ತು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಜನರ ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತಿದೆ. ಡೆಂಗಿ ಚಿಕೂನ್ ಗುನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಗೊತ್ತಿದ್ದರೂ ಆರೋಗ್ಯ ಇಲಾಖೆ ಪುರಸಭೆ ಅಧಿಕಾರಿಗಳು ತಕ್ಷಣ ಗಮನ ಹರಿಸಬೇಕಿತ್ತು.
ರಾಜು ಸೊಗಲ, ಬೈಲಹೊಂಗಲ
ಬೆಳಗಾವಿಯ ಶಿವಾಜಿ ನಗರದಲ್ಲಿ ಡೆಂಗಿ ಲಾರ್ವಾಗಳ ತಪಾಸಣೆ ಮಾಡಲಾಯಿತು