ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಉತ್ತರ ಪ್ರದೇಶದ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಸ್ಪರ್ಧೆಯಿಂದ ಹೆದರಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವೈಯನಾಡಿಗೆ ಪಲಾಯನ ಮಾಡಿದ್ದಾರೆ. ಹಿಂದೂಗಳು ಕಾಂಗ್ರೆಸ್ಗೆ ಮತ ಹಾಕುವುದಿಲ್ಲ ಎನ್ನುವ ತೀರ್ಮಾನಕ್ಕೆ ಬಂದು ಮುಸ್ಲಿಂ, ಕ್ರಿಶ್ಚಿಯನ್ನರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಕ್ಕೆ ಹೋಗಿದ್ದಾರೆ’ ಎಂದು ಟೀಕಿಸಿದರು.