<p><strong>ಬೆಳಗಾವಿ:</strong> ‘ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ ಅಭಿವೃದ್ಧಿ ಎನ್ನುವುದು ಹುಡುಕಿದರೂ ಕಾಣುತ್ತಿರಲಿಲ್ಲ. ಈಗ ಅಭಿವೃದ್ಧಿಯಾಗದ ಗ್ರಾಮ ಕಾಣುತ್ತಿಲ್ಲ. ಪ್ರತಿ ಗ್ರಾಮಕ್ಕೂ ಒಂದಿಲ್ಲೊಂದು ಯೋಜನೆ ತಂದಿದ್ದೇನೆ. ಕೇವಲ 3 ವರ್ಷದಲ್ಲಿ ಚಿತ್ರಣವೇ ಬದಲಾಗಿದೆ. ಇದಕ್ಕೆ ಕ್ಷೇತ್ರದ ಜನರ ಸಹಕಾರ, ಪ್ರೀತಿ, ವಿಶ್ವಾಸವೇ ಕಾರಣ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>ಕ್ಷೇತ್ರದ ಸಾವಗಾಂವ ಗ್ರಾಮದಲ್ಲಿ 2019-20ನೇ ಸಾಲಿನ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಲ್ಲಿ ₹ 21 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಸಂಕಲ್ಪವಾಗಿದೆ. ಜನರ ಋಣ ತೀರಿಸುವುದು ನನ್ನ ಕರ್ತವ್ಯ. ಅಭಿವೃದ್ಧಿಗೆ ಕೊನೆ ಎನ್ನುವುದಿಲ್ಲ. ಹಾಗಾಗಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ’ ಎಂದರು.</p>.<p>ಎನ್.ಕೆ. ಪಾಟೀಲ, ಮಾಯಪ್ಪ ಗಾಟಿಗಸ್ತಿ, ಗಣಪತಿ ಪಾಟೀಲ, ವೈ.ಎಂ. ಪಾಟೀಲ, ಗೀತಾ ಸಾವಗಾಂವ್ಕರ, ಸಂಗೀತಾ ಬಣಕಾರ, ಕಲ್ಲಪ್ಪ ಪಾಟೀಲ, ಲಕ್ಷ್ಮಿ ಸುತಾರ, ಬಾಳು ಪಾಟೀಲ, ಕೃಷ್ಣ, ನಿತಾಜಿ ಮುಲಗಿ, ಭುಜಂಗ ಮುಲಗಿ, ಲಕ್ಷ್ಮಣ ಕದಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ ಅಭಿವೃದ್ಧಿ ಎನ್ನುವುದು ಹುಡುಕಿದರೂ ಕಾಣುತ್ತಿರಲಿಲ್ಲ. ಈಗ ಅಭಿವೃದ್ಧಿಯಾಗದ ಗ್ರಾಮ ಕಾಣುತ್ತಿಲ್ಲ. ಪ್ರತಿ ಗ್ರಾಮಕ್ಕೂ ಒಂದಿಲ್ಲೊಂದು ಯೋಜನೆ ತಂದಿದ್ದೇನೆ. ಕೇವಲ 3 ವರ್ಷದಲ್ಲಿ ಚಿತ್ರಣವೇ ಬದಲಾಗಿದೆ. ಇದಕ್ಕೆ ಕ್ಷೇತ್ರದ ಜನರ ಸಹಕಾರ, ಪ್ರೀತಿ, ವಿಶ್ವಾಸವೇ ಕಾರಣ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>ಕ್ಷೇತ್ರದ ಸಾವಗಾಂವ ಗ್ರಾಮದಲ್ಲಿ 2019-20ನೇ ಸಾಲಿನ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಲ್ಲಿ ₹ 21 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಸಂಕಲ್ಪವಾಗಿದೆ. ಜನರ ಋಣ ತೀರಿಸುವುದು ನನ್ನ ಕರ್ತವ್ಯ. ಅಭಿವೃದ್ಧಿಗೆ ಕೊನೆ ಎನ್ನುವುದಿಲ್ಲ. ಹಾಗಾಗಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ’ ಎಂದರು.</p>.<p>ಎನ್.ಕೆ. ಪಾಟೀಲ, ಮಾಯಪ್ಪ ಗಾಟಿಗಸ್ತಿ, ಗಣಪತಿ ಪಾಟೀಲ, ವೈ.ಎಂ. ಪಾಟೀಲ, ಗೀತಾ ಸಾವಗಾಂವ್ಕರ, ಸಂಗೀತಾ ಬಣಕಾರ, ಕಲ್ಲಪ್ಪ ಪಾಟೀಲ, ಲಕ್ಷ್ಮಿ ಸುತಾರ, ಬಾಳು ಪಾಟೀಲ, ಕೃಷ್ಣ, ನಿತಾಜಿ ಮುಲಗಿ, ಭುಜಂಗ ಮುಲಗಿ, ಲಕ್ಷ್ಮಣ ಕದಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>