<p><strong>ಸವದತ್ತಿ</strong>: ರೇಣುಕಾದೇವಿ ದರ್ಶನಕ್ಕೆ ಬಂದ ಅಣ್ಣಪ್ಪ ದಿವಟಗಿ ಮೇಲೆ ನಡೆದ ಹಲ್ಲೆಯನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಘಟನೆಯಲ್ಲಿ ಭಾಗಿಯಾದ ಹೋಮ್ಗಾರ್ಡ ಮತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕೆಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು.</p>.<p>ಯಲ್ಲಮ್ಮ ದೇವಸ್ಥಾನದಲ್ಲಿ ನಡೆದ ಘಟನೆ ಕುರಿತು ಶುಕ್ರವಾರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಐ ಧರ್ಮಾಕರ ಧರ್ಮಟ್ಟಿ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.</p>.<p>ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾರ್ಯಕರ್ತರಿಗೆ ‘ಸವದತ್ತಿ ಚಲೋ’ ಕರೆ ನೀಡಬೇಕಾದೀತು. ಈಗಾಗಲೇ ಕಾನೂನು ರೀತಿ ಹೋರಾಟ ನಡೆಸಿದ್ದೇವೆ. ತಪ್ಪಿದ್ದವರಿಗೆ ಶಿಕ್ಷೆ ನೀಡಿರಿ. ಇಂತಹ ಸಿಬ್ಬಂದಿಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಅವರು ಒತ್ತಾಯಿಸಿದರು.</p>.<p>ದೂರುದಾರ ಅಣ್ಣಪ್ಪ ಮಾತನಾಡಿದರು. </p>.<p>ಮನವಿ ಸ್ವೀಕರಿಸಿ ಮಾತನಾಡಿದ ಪಿಐ ಧರ್ಮಾಕರ ಧರ್ಮಟ್ಟಿ, ‘ಈ ಘಟನೆ ಕುರಿತು ಇಲಾಖೆಗೂ ವಿಷಾದವಿದೆ. ದೇವಸ್ಥಾನಕ್ಕೆ ಬರುವ ಜನ ಒಂದೇ ರೀತಿ ಇರುವದಿಲ್ಲ. ಶಾಂತಿ ಸುವ್ಯವಸ್ಥೆ ಪೊಲೀಸ್ ಇಲಾಖೆಯ ಆದ್ಯತೆ. ಈ ಸಿಬ್ಬಂದಿಯನ್ನು ಬೇರೆಡೆ ನಿಯೋಜಿಸಲಾಗಿದೆ. ಇಲಾಖೆಯಲ್ಲಿನ ಮಾಹಿತಿ ಮೇರೆಗೆ ತನಿಖೆ ನಡೆದಿದ್ದು ಮೇಲಧಿಕಾರಿಗೆ ವರದಿ ಸಲ್ಲಿಸಲಾಗುವುದು’ ಎಂದರು.</p>.<p>ಈ ವೇಳೆ ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ</strong>: ರೇಣುಕಾದೇವಿ ದರ್ಶನಕ್ಕೆ ಬಂದ ಅಣ್ಣಪ್ಪ ದಿವಟಗಿ ಮೇಲೆ ನಡೆದ ಹಲ್ಲೆಯನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಘಟನೆಯಲ್ಲಿ ಭಾಗಿಯಾದ ಹೋಮ್ಗಾರ್ಡ ಮತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕೆಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು.</p>.<p>ಯಲ್ಲಮ್ಮ ದೇವಸ್ಥಾನದಲ್ಲಿ ನಡೆದ ಘಟನೆ ಕುರಿತು ಶುಕ್ರವಾರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಐ ಧರ್ಮಾಕರ ಧರ್ಮಟ್ಟಿ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.</p>.<p>ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾರ್ಯಕರ್ತರಿಗೆ ‘ಸವದತ್ತಿ ಚಲೋ’ ಕರೆ ನೀಡಬೇಕಾದೀತು. ಈಗಾಗಲೇ ಕಾನೂನು ರೀತಿ ಹೋರಾಟ ನಡೆಸಿದ್ದೇವೆ. ತಪ್ಪಿದ್ದವರಿಗೆ ಶಿಕ್ಷೆ ನೀಡಿರಿ. ಇಂತಹ ಸಿಬ್ಬಂದಿಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಅವರು ಒತ್ತಾಯಿಸಿದರು.</p>.<p>ದೂರುದಾರ ಅಣ್ಣಪ್ಪ ಮಾತನಾಡಿದರು. </p>.<p>ಮನವಿ ಸ್ವೀಕರಿಸಿ ಮಾತನಾಡಿದ ಪಿಐ ಧರ್ಮಾಕರ ಧರ್ಮಟ್ಟಿ, ‘ಈ ಘಟನೆ ಕುರಿತು ಇಲಾಖೆಗೂ ವಿಷಾದವಿದೆ. ದೇವಸ್ಥಾನಕ್ಕೆ ಬರುವ ಜನ ಒಂದೇ ರೀತಿ ಇರುವದಿಲ್ಲ. ಶಾಂತಿ ಸುವ್ಯವಸ್ಥೆ ಪೊಲೀಸ್ ಇಲಾಖೆಯ ಆದ್ಯತೆ. ಈ ಸಿಬ್ಬಂದಿಯನ್ನು ಬೇರೆಡೆ ನಿಯೋಜಿಸಲಾಗಿದೆ. ಇಲಾಖೆಯಲ್ಲಿನ ಮಾಹಿತಿ ಮೇರೆಗೆ ತನಿಖೆ ನಡೆದಿದ್ದು ಮೇಲಧಿಕಾರಿಗೆ ವರದಿ ಸಲ್ಲಿಸಲಾಗುವುದು’ ಎಂದರು.</p>.<p>ಈ ವೇಳೆ ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>