<p><strong>ನಂದಗಡ (ಬೆಳಗಾವಿ ಜಿಲ್ಲೆ):</strong> 'ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣ ನನಗೆ ಬೆಳಿಗ್ಗೆಯಷ್ಟೇ ಗೊತ್ತಾಗಿದೆ. ಅವರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳುತ್ತೇವೆ. ಎಷ್ಟೇ ದೊಡ್ಡ ಅಧಿಕಾರಿ ಆದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ವಿಚಾರಣೆ ಮಾಡಿ ಆಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.</p><p>ನಂದಗಡದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಕೆಟ್ಟ ಕೆಲಸ ಮಾಡಿದವರ ಮೇಲೆ ಖಂಡಿತ ಕ್ರಮ ವಹಿಸಲಾಗುವುದು' ಎಂದರು.</p><p>ಸಿ.ಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, 'ಲೂಟಿ ಮಾಡಿಯೇ ಅವರು ಜೈಲಿಗೆ ಹೋಗಿದ್ದರಲ್ಲ. ಅವರಿಗೆ ಏನು ನೈತಿಕತೆ ಇದೆ. ಮತ್ತೆ ಬಳ್ಳಾರಿಗೆ ಬರಬೇಡಿ ಅಂತಾ ಅವರಿಗೆ ಏಕೆ ನಿರ್ಬಂಧ ವಿಧಿಸಲಾಗಿತ್ತು. ಈಗಲೂ ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ಇದೆ. ವಿರೋಧ ಪಕ್ಷಗಳಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಸುಳ್ಳು ಆರೋಪ ಮಾಡುತ್ತಾರೆ. ಆ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಈಗ ಅಧಿವೇಶನ ಶುರು ಆಗುತ್ತದೆ. ಆಗ ಮಾತನಾಡಲಿ ನೋಡೋಣ' ಎಂದು ಸವಾಲು ಹಾಕಿದರು.</p><p>ಜ.21ರಂದು ಗಡಿ ವಿವಾದದ ವ್ಯಾಜ್ಯ ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬರಲಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಒಳ್ಳೆಯ ವಕೀಲರನ್ನು ನೇಮಿಸುತ್ತೇವೆ. ಗಡಿ ವಿಚಾರದಲ್ಲಿ ಕರ್ನಾಟಕ ವಿರುದ್ಧ ಪ್ರಕರಣ ಹಾಕಲು ಮಹಾರಾಷ್ಟ್ರದವರಿಗೆ ಅವಕಾಶವೇ ಇಲ್ಲ. ನಾವು ನ್ಯಾಯಾಂಗ ಮಾರ್ಗದಲ್ಲಿ ನಾವು ಸಾಗುತ್ತೇವೆ. ಗಡಿ ವಿಚಾರ ನ್ಯಾಯಾಂಗದಲ್ಲಿ ಬರಬೇಕೋ, ಬರಬಾರದೋ ಎನ್ನುವ ಮೊದಲು ತೀರ್ಮಾನ ಆಗಬೇಕಿದೆ. ಆ ಮೇಲೆ ನೋಡೋಣ' ಎಂದರು.</p>.ಮಹಿಳೆಯೊಂದಿಗೆ ಅಸಭ್ಯ ವರ್ತನೆ ವಿಡಿಯೊ: ತನಿಖೆಗೆ ಆಗ್ರಹಿಸಿದ DGP ರಾಮಚಂದ್ರ ರಾವ್.<p>ಮತದಾರ ಪಟ್ಟಿಯಲ್ಲಿ ಮೂರು ಕೋಟಿ ಜನರ ಹೆಸರು ಕಳೆದುಹೋದ ಆಗಿರುವ ವಿಚಾರಕ್ಕೆ 'ಕಾಂಗ್ರೆಸ್ ನಿಂದ ಎಲ್ಲರಿಗೂ ಎಚ್ಚರಿಕೆ ಕೊಟ್ಟಿದ್ದೇವೆ. ಎಸ್ ಐ ಆರ್ ಮಾಡುವಾಗ ಎಚ್ಚರಿಕೆಯಿಂದ ಮಾಡಲು ಬಿ ಎಲ್ ಎಗಳಿಗೆ ಸೂಚನೆ ನೀಡಿದ್ದೇವೆ. ಅದರಲ್ಲಿ ರಾಜಕೀಯ ಮಾಡಲ್ಲ. ನಿಜವಾದ ಮತದಾರರು ಬಿಟ್ಟು ಹೋಗಬಾರದು' ಎಂದರು.</p><p>'ಗ್ರೇಟರ್ ಬೆಂಗಳೂರು ಚುನಾವಣೆ ಬ್ಯಾಲೆಟ್ ಪೇಪರಿನಲ್ಲಿಯೇ ಮಾಡಬೇಕು ಎನ್ನುವುದು ನಮ್ಮದು ಅದೇ ಬೇಡಿಕೆ ಆಗಿದೆ. ಅದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ನಿಜವಾದ ಮತದಾರರು ಪಟ್ಟಿಯಿಂದ ಬಿಟ್ಟು ಹೋಗಬಾರದು' ಎಂದು ಸ್ಪಷ್ಟಪಡಿಸಿದರು. </p><p>'ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ದೆಹಲಿಗೆ ಹೋಗಲು ತಿಂಗಳ ಅಂತ್ಯ ಅಂತ ಏನಿಲ್ಲ. ಹೈಕಮಾಂಡ್ ಯಾವಾಗ ಕರೆಯುತ್ತದೆ ಆವಾಗ ಹೋಗುತ್ತೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂದಗಡ (ಬೆಳಗಾವಿ ಜಿಲ್ಲೆ):</strong> 'ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣ ನನಗೆ ಬೆಳಿಗ್ಗೆಯಷ್ಟೇ ಗೊತ್ತಾಗಿದೆ. ಅವರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳುತ್ತೇವೆ. ಎಷ್ಟೇ ದೊಡ್ಡ ಅಧಿಕಾರಿ ಆದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ವಿಚಾರಣೆ ಮಾಡಿ ಆಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.</p><p>ನಂದಗಡದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಕೆಟ್ಟ ಕೆಲಸ ಮಾಡಿದವರ ಮೇಲೆ ಖಂಡಿತ ಕ್ರಮ ವಹಿಸಲಾಗುವುದು' ಎಂದರು.</p><p>ಸಿ.ಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, 'ಲೂಟಿ ಮಾಡಿಯೇ ಅವರು ಜೈಲಿಗೆ ಹೋಗಿದ್ದರಲ್ಲ. ಅವರಿಗೆ ಏನು ನೈತಿಕತೆ ಇದೆ. ಮತ್ತೆ ಬಳ್ಳಾರಿಗೆ ಬರಬೇಡಿ ಅಂತಾ ಅವರಿಗೆ ಏಕೆ ನಿರ್ಬಂಧ ವಿಧಿಸಲಾಗಿತ್ತು. ಈಗಲೂ ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ಇದೆ. ವಿರೋಧ ಪಕ್ಷಗಳಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಸುಳ್ಳು ಆರೋಪ ಮಾಡುತ್ತಾರೆ. ಆ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಈಗ ಅಧಿವೇಶನ ಶುರು ಆಗುತ್ತದೆ. ಆಗ ಮಾತನಾಡಲಿ ನೋಡೋಣ' ಎಂದು ಸವಾಲು ಹಾಕಿದರು.</p><p>ಜ.21ರಂದು ಗಡಿ ವಿವಾದದ ವ್ಯಾಜ್ಯ ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬರಲಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಒಳ್ಳೆಯ ವಕೀಲರನ್ನು ನೇಮಿಸುತ್ತೇವೆ. ಗಡಿ ವಿಚಾರದಲ್ಲಿ ಕರ್ನಾಟಕ ವಿರುದ್ಧ ಪ್ರಕರಣ ಹಾಕಲು ಮಹಾರಾಷ್ಟ್ರದವರಿಗೆ ಅವಕಾಶವೇ ಇಲ್ಲ. ನಾವು ನ್ಯಾಯಾಂಗ ಮಾರ್ಗದಲ್ಲಿ ನಾವು ಸಾಗುತ್ತೇವೆ. ಗಡಿ ವಿಚಾರ ನ್ಯಾಯಾಂಗದಲ್ಲಿ ಬರಬೇಕೋ, ಬರಬಾರದೋ ಎನ್ನುವ ಮೊದಲು ತೀರ್ಮಾನ ಆಗಬೇಕಿದೆ. ಆ ಮೇಲೆ ನೋಡೋಣ' ಎಂದರು.</p>.ಮಹಿಳೆಯೊಂದಿಗೆ ಅಸಭ್ಯ ವರ್ತನೆ ವಿಡಿಯೊ: ತನಿಖೆಗೆ ಆಗ್ರಹಿಸಿದ DGP ರಾಮಚಂದ್ರ ರಾವ್.<p>ಮತದಾರ ಪಟ್ಟಿಯಲ್ಲಿ ಮೂರು ಕೋಟಿ ಜನರ ಹೆಸರು ಕಳೆದುಹೋದ ಆಗಿರುವ ವಿಚಾರಕ್ಕೆ 'ಕಾಂಗ್ರೆಸ್ ನಿಂದ ಎಲ್ಲರಿಗೂ ಎಚ್ಚರಿಕೆ ಕೊಟ್ಟಿದ್ದೇವೆ. ಎಸ್ ಐ ಆರ್ ಮಾಡುವಾಗ ಎಚ್ಚರಿಕೆಯಿಂದ ಮಾಡಲು ಬಿ ಎಲ್ ಎಗಳಿಗೆ ಸೂಚನೆ ನೀಡಿದ್ದೇವೆ. ಅದರಲ್ಲಿ ರಾಜಕೀಯ ಮಾಡಲ್ಲ. ನಿಜವಾದ ಮತದಾರರು ಬಿಟ್ಟು ಹೋಗಬಾರದು' ಎಂದರು.</p><p>'ಗ್ರೇಟರ್ ಬೆಂಗಳೂರು ಚುನಾವಣೆ ಬ್ಯಾಲೆಟ್ ಪೇಪರಿನಲ್ಲಿಯೇ ಮಾಡಬೇಕು ಎನ್ನುವುದು ನಮ್ಮದು ಅದೇ ಬೇಡಿಕೆ ಆಗಿದೆ. ಅದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ನಿಜವಾದ ಮತದಾರರು ಪಟ್ಟಿಯಿಂದ ಬಿಟ್ಟು ಹೋಗಬಾರದು' ಎಂದು ಸ್ಪಷ್ಟಪಡಿಸಿದರು. </p><p>'ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ದೆಹಲಿಗೆ ಹೋಗಲು ತಿಂಗಳ ಅಂತ್ಯ ಅಂತ ಏನಿಲ್ಲ. ಹೈಕಮಾಂಡ್ ಯಾವಾಗ ಕರೆಯುತ್ತದೆ ಆವಾಗ ಹೋಗುತ್ತೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>