<p><strong>ಬೆಳಗಾವಿ: </strong>‘ಕನ್ನಡ ಹಾಗೂ ವಚನ ಸಾಹಿತ್ಯ ಉಳಿಸುವ ಉದ್ದೇಶದಿಂದ ನಾಗನೂರು ರುದ್ರಾಕ್ಷಿಮಠದಲ್ಲಿ ಸಂಗ್ರಹಿಸಿರುವ ತಾಳೆಪತ್ರಗಳ ಡಿಜಿಟಲೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ತಿಳಿಸಿದರು.</p>.<p>‘ಶಿವಬಸವ ನಗರದಲ್ಲಿರುವ ಮಠದ ವಚನ ಅಧ್ಯಯನ ಕೇಂದ್ರದಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸುಮಾರು 400–500 ವರ್ಷಗಳು ಹಳೆಯದಾದ ತಾಳೆಪತ್ರಗಳಿಗೆ ಡಿಜಿಟಲ್ ಸ್ಪರ್ಶ ನೀಡಲಾಗುತ್ತಿದೆ. ಅಶೋಕ ದೇಮನೂರು ನೇತೃತ್ವದಲ್ಲಿ ನಡೆದಿದೆ. ಕನ್ನಡ ಸಾಹಿತ್ಯದ ಇತಿಹಾಸ ಉಳಿಸುವ ಕಾರ್ಯ ಈ ಮೂಲಕ ಆಗುತ್ತಿದೆ’ ಎಂದರು.</p>.<p>‘ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಸಾಹಿತ್ಯ ಆಸಕ್ತರು ಕೂಡ ಪಾಲ್ಗೊಳ್ಳಬಹುದಾಗಿದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಮುಖಂಡ ಶಂಕರ ಗುಡಸ್ ಮಾತನಾಡಿ, ‘ತಾಳೆಗರಿಗಳು ಹಾಳಾದರೆ ಅವುಗಳಲ್ಲಿರುವ ಮಾಹಿತಿಯೂ ಕಳೆದು ಹೋಗುತ್ತದೆ. ಆಗ ನಮಗೆ ಇತಿಹಾಸ ಸಿಗುವುದಿಲ್ಲ. ಶ್ರೀಗಳ ಆಶಯದಂತೆ ಡಿಜಿಟಲೀಕರಣ ನಡೆಯುತ್ತಿದೆ. ಇದಕ್ಕೆ ಸ್ವಯಂಸೇವಕರು ಬೇಕಾಗಿದ್ದಾರೆ. 20 ದಿನಗಳವರೆಗೆ ನಡೆಯಲಿರುವ ಈ ಕಾರ್ಯದಲ್ಲಿ ಕನ್ನಡ ಮತ್ತು ವಚನ ಸಾಹಿತ್ಯದ ಅಭಿಮಾನಿಗಳು ಭಾಗವಹಿಸಬೇಕು’ ಎಂದು ಕೋರಿದರು.</p>.<p>ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕನ್ನಡ ಹಾಗೂ ವಚನ ಸಾಹಿತ್ಯ ಉಳಿಸುವ ಉದ್ದೇಶದಿಂದ ನಾಗನೂರು ರುದ್ರಾಕ್ಷಿಮಠದಲ್ಲಿ ಸಂಗ್ರಹಿಸಿರುವ ತಾಳೆಪತ್ರಗಳ ಡಿಜಿಟಲೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ತಿಳಿಸಿದರು.</p>.<p>‘ಶಿವಬಸವ ನಗರದಲ್ಲಿರುವ ಮಠದ ವಚನ ಅಧ್ಯಯನ ಕೇಂದ್ರದಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸುಮಾರು 400–500 ವರ್ಷಗಳು ಹಳೆಯದಾದ ತಾಳೆಪತ್ರಗಳಿಗೆ ಡಿಜಿಟಲ್ ಸ್ಪರ್ಶ ನೀಡಲಾಗುತ್ತಿದೆ. ಅಶೋಕ ದೇಮನೂರು ನೇತೃತ್ವದಲ್ಲಿ ನಡೆದಿದೆ. ಕನ್ನಡ ಸಾಹಿತ್ಯದ ಇತಿಹಾಸ ಉಳಿಸುವ ಕಾರ್ಯ ಈ ಮೂಲಕ ಆಗುತ್ತಿದೆ’ ಎಂದರು.</p>.<p>‘ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಸಾಹಿತ್ಯ ಆಸಕ್ತರು ಕೂಡ ಪಾಲ್ಗೊಳ್ಳಬಹುದಾಗಿದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಮುಖಂಡ ಶಂಕರ ಗುಡಸ್ ಮಾತನಾಡಿ, ‘ತಾಳೆಗರಿಗಳು ಹಾಳಾದರೆ ಅವುಗಳಲ್ಲಿರುವ ಮಾಹಿತಿಯೂ ಕಳೆದು ಹೋಗುತ್ತದೆ. ಆಗ ನಮಗೆ ಇತಿಹಾಸ ಸಿಗುವುದಿಲ್ಲ. ಶ್ರೀಗಳ ಆಶಯದಂತೆ ಡಿಜಿಟಲೀಕರಣ ನಡೆಯುತ್ತಿದೆ. ಇದಕ್ಕೆ ಸ್ವಯಂಸೇವಕರು ಬೇಕಾಗಿದ್ದಾರೆ. 20 ದಿನಗಳವರೆಗೆ ನಡೆಯಲಿರುವ ಈ ಕಾರ್ಯದಲ್ಲಿ ಕನ್ನಡ ಮತ್ತು ವಚನ ಸಾಹಿತ್ಯದ ಅಭಿಮಾನಿಗಳು ಭಾಗವಹಿಸಬೇಕು’ ಎಂದು ಕೋರಿದರು.</p>.<p>ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>